Advertisement

ಕುಕ್ಕೆ, ಧರ್ಮಸ್ಥಳಕ್ಕೆ ರಾಜ್ಯಪಾಲರ ಭೇಟಿ

10:51 PM Feb 13, 2023 | Team Udayavani |

ಧರ್ಮಸ್ಥಳ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಂಗಳ ವಾರ ಮತ್ತು ಬುಧವಾರ ಕರಾ ವಳಿಯ ತೀರ್ಥಕ್ಷೇತ್ರಗಳ ದರ್ಶನ ಮಾಡುವರು.

Advertisement

ಮಂಗಳವಾರ ಪೂರ್ವಾಹ್ನ 8ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 1 ಗಂಟೆಗೆ ಮೂಡಿ ಗೆರೆ ಅತಿಥಿ ಗೃಹಕ್ಕೆ ಬರುವರು.

ಅಪರಾಹ್ನ 3.30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನದ ಬಳಿಕ ಸಂಜೆ 5ಕ್ಕೆ ಧರ್ಮಸ್ಥಳ ತಲುಪುವರು. ರಾತ್ರಿ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ಬುಧವಾರ ಬೆಳಗ್ಗೆ ದೇವರ ದರ್ಶನದ ಬಳಿಕ ಅಮೃತ ವರ್ಷಿಣಿ ಸಭಾಭವನದಲ್ಲಿ ನವಜೀವನ ಸಮಾವೇಶದಲ್ಲಿ ಭಾಗವಹಿಸುವರು. ಅಪರಾಹ್ನ 3 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ ಕುದುರೆಮುಖದಲ್ಲಿ ಅರಣ್ಯ ಇಲಾಖೆಯ ಅತಿಥಿ ಗೃಹದಲ್ಲಿ ತಂಗುವರು ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: ನಾಗರಹೊಳೆ ಪಕ್ಷಿ ಸಮೀಕ್ಷೆಯಲ್ಲಿ 290 ಕ್ಕೂ ಹೆಚ್ಚು ಪಕ್ಷಿ ಪ್ರಬೇಧಗಳ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next