Advertisement

Karnataka ಅನುಕಂಪ ಆಧಾರಿತ ನೇಮಕಾತಿಗೆ ಸರ್ಕಾರದ ತಡೆ

01:21 AM Aug 08, 2023 | Team Udayavani |

ಬೆಂಗಳೂರು: ಖಾಲಿ ಹುದ್ದೆ ಭರ್ತಿಗಾಗಿ ಅನು ಕಂಪದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರಿಂದ ಬರುವ ಪ್ರಸ್ತಾವನೆಗಳನ್ನು ಬಾಕಿ ಇರಿಸುವಂತೆ ಎಲ್ಲ ಪಂಚಾಯತ್‌ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ದೇಶನ ನೀಡಿದೆ.

Advertisement

ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಅನುಕಂಪ ಆಧಾರದ ಮೇಲೆ ಹುದ್ದೆ ಭರ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾವನೆಗಳು ಬರುತ್ತಿದ್ದು, ಅದನ್ನು ಆಧರಿಸಿ ಜಿಲ್ಲಾ ಮತ್ತು ತಾ.ಪಂ. ಕಚೇರಿಗಳಲ್ಲಿ ಕೆಲಸ ಕೊಡಲಾಗುತ್ತಿದೆ. ಹೀಗೆ ಮುಂದುವರಿದರೆ ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಎಲ್ಲ ಹುದ್ದೆ ಗಳನ್ನೂ ಅನುಕಂಪದ ಆಧಾರದ ಮೇಲೆಯೇ ಭರ್ತಿ ಮಾಡುವ ಸಂದರ್ಭ ಉಂಟಾಗುತ್ತದೆ.

ಅಲ್ಲದೆ ಇದರಿಂದ ಪಂಚಾಯತ್‌ ಕಚೇರಿಗಳ ಕಾರ್ಯನಿರ್ವಹಣೆಯ ಗುಣಮಟ್ಟ ಕುಸಿಯುವ ಸಾಧ್ಯತೆ ಇದ್ದು, ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುವ ವೇಳೆ ಮೃತಪಟ್ಟ ನೌಕರರ ಕುಟುಂಬ ಸದಸ್ಯರನ್ನು ನೇಮ ಕ ಮಾಡಲು ಹುದ್ದೆಗಳು ಲಭ್ಯವಾಗದ ಸನ್ನಿವೇಶ ನಿರ್ಮಾಣ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆತಂಕ ವ್ಯಕ್ತ ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next