Advertisement

ಸರಕಾರಿ ಬಸ್‌ -ಕಾರು ಢಿಕ್ಕಿ: ಮಹಿಳೆ ಸೇರಿ ಮೂವರ ದುರ್ಮರಣ

09:24 AM Jul 15, 2019 | Team Udayavani |

ಸುಳ್ಯ: ಓವರ್ ಟೇಕ್ ಮಾಡುವ ಭರದಲ್ಲಿ ಸರಕಾರಿ ಬಸ್ ಗೆ ಕಾರು ಢಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಮೃತಪಟ್ಟು
ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡು, ಘಟನೆ ಅರಂಬೂರಿನಲ್ಲಿ ನಡೆದಿದೆ.

Advertisement

ಮೃತಪಟ್ಟವರನ್ನು ರಾಮನಗರ ಜಿಲ್ಲೆಯ ನಿವಾಸಿಗಳಾದ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂದು ಗುರುತಿಸಲಾಗಿದೆ.

ಕೊಳ್ಳೆಗಾಲ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ. ಬಸ್ ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರು ಸಮೀಪದ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ರಿಡ್ಜ್ ಕಾರು ರಿಕ್ಷಾವೊಂದನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಢಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next