Advertisement

ಎನ್‌ಎಂಸಿ ವಿಧೇಯಕಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

12:36 AM Jul 18, 2019 | Team Udayavani |

ಹೊಸದಿಲ್ಲಿ: ಬಹು ನಿರೀಕ್ಷಿತ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ನೇತೃತ್ವದ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಹಾಲಿ ನಡೆಯುವ ಮುಂಗಾರು ಅಧಿವೇಶನದಲ್ಲಿಯೇ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳುವ ಇರಾದೆಯಲ್ಲಿದೆ ಸರಕಾರ.

Advertisement

ತಿದ್ದುಪಡಿ ವಿಧೇಯಕದಲ್ಲಿ ಎಂಬಿಬಿಎಸ್‌ನ ಅಂತಿಮ ವರ್ಷದ ಪರೀಕ್ಷೆಯನ್ನೇ ವೈದ್ಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸೂಚಿಸಲಾಗಿದೆ. ಜತೆಗೆ ಹಾಲಿ ಇರುವ ಭಾರತೀಯ ವೈದ್ಯಕೀಯ ಮಂಡಳಿ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಯಾಗಲಿದೆ. ವೈದ್ಯ ಪ್ರವೇಶ ಪರೀಕ್ಷೆ ಮತ್ತು ಅಂತಿಮ ಹಂತದ ಪರೀಕ್ಷೆ ಏಮ್ಸ್‌, ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಪ್ರಮುಖ ಸಂಸ್ಥೆಗಳಿಗೂ ಅನ್ವಯ ವಾಗಲಿದೆ. ಇದೇ ವೇಳೆ ದಿವಾಳಿ ಕಾಯ್ದೆಗೆ ಏಳು ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. ಇದರಿಂದಾಗಿ ಕಾರ್ಪೊರೇಟ್‌ ಕ್ಷೇತ್ರದ ವಿವಾದಗಳನ್ನು ಸುಲಲಿತವಾಗಿ ಇತ್ಯರ್ಥಗೊಳಿಸಲು ನೆರವಾಗಲಿದೆ. ಹದಿ ನೈದನೇ ಹಣಕಾಸು ಆಯೋಗದ ಅವಧಿಯಲ್ಲಿ ನ.30ರ ವರೆಗೆ ವಿಸ್ತರಿಸುವ ಬಗ್ಗೆಯೂ ಸಂಪುಟ ತೀರ್ಮಾನ ಕೈಗೊಂಡಿದೆ. ಕಂಪನಿ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕಕ್ಕೂ ಅಂಗೀಕಾರ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next