Advertisement

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

11:10 PM Oct 17, 2024 | Team Udayavani |

ದಾವಣಗೆರೆ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಗುರುವಾರ(ಅ17) ಪ್ರಕರಣ ದಾಖಲಾಗಿದೆ.

Advertisement

ಅ.‌14 ರಂದು ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಯತ್ನಾಳ್, ರಾಜ್ಯ ಸರ್ಕಾರವನ್ನು ಪತನಗೊಳಿಸಲು ನಾಯಕ ರೊಬ್ಬರು ಒಂದು ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ.‌ ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರ ಪತ್ತೆಯಾಗಿತ್ತು.‌ ಅವರು ಯಾರೂ ಎಂಬುದು ಮಾಧ್ಯಮ ದವರಿಗೆ ಗೊತ್ತಿದೆ. ರಾಜ್ಯದಲ್ಲಿ ಜನಪರ ಸರ್ಕಾರವಿದ್ದರೂ ಸರ್ಕಾರ ಪತನಗೊಳಿಸುವ ಸಂಚು ರೂಪಿಸಿರುವುದು ಯತ್ನಾಳ್ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ರೀತಿಯ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನ ರಾಜಾಜಿನಗರದ ನಿವಾಸಿ ಎಸ್. ಮನೋಹ ರ್ ಎಂಬುವರು ದೂರು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next