Advertisement

ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ

10:39 PM Dec 29, 2021 | Team Udayavani |

ಹುಬ್ಬಳ್ಳಿ: ಕೊರಗ ಸಮುದಾಯದ ಮನೆ ಸಮಾರಂಭದ ಮೇಲೆ ದಾಳಿ ನಡೆಸಿ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿನ ಪಿಎಸ್‌ಐ ಅಮಾನತು ಹಾಗೂ ಐವರನ್ನು ವರ್ಗಾವಣೆ ಮಾಡಿ ಇಲಾಖೆ ತನಿಖೆಗೆ ಸೂಚಿಸಲಾಗಿದ್ದು, ರಾಜ್ಯ ಸರಕಾರ ದಲಿತರ ರಕ್ಷಣೆಗೆ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗ್ರಾಮದ ದಲಿತ ಕೇರಿ ಅದರಲ್ಲೂ ಕೊರಗ ಸಮುದಾಯದವರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪಿಎಸ್‌ಐ ಹಾಗೂ ಸಿಬ್ಬಂದಿ ಲಾಠಿ ಪ್ರಹಾರ ಮಾಡಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲಿನ ಜನರೊಂದಿಗೆ ಮಾತನಾಡಿದ್ದೇನೆ. ಇದಕ್ಕೆ ಕಾರಣರಾದ ಪಿಎಸ್‌ಐ ಅವರನ್ನು ಕೂಡಲೇ ಅಮಾನತು ಮಾಡಲಾಗಿದೆ. ಇವರೊಂದಿಗಿದ್ದ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ತನಿಖೆ ಇಲಾಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ:ಅನಂತನಾಗ್: ಉಗ್ರರೊಂದಿಗೆ ಗುಂಡಿನ ಕಾಳಗ; ಪೊಲೀಸ್ ಗೆ ಗಾಯ

ಸಮಾಜದ ಕಟ್ಟಕಡೆಯ ವ್ಯಕ್ತಿಯಾಗಿ ಸಮಾಜದೊಂದಿಗೆ ಬದುಕುತ್ತಿರುವ ಕೊರಗ ಜನಾಂಗದ ಮೇಲಿನ ಹಲ್ಲೆ ಸರಿಯಲ್ಲ. ದಲಿತರ ರಕ್ಷಣೆಗೆ ನಮ್ಮ ಇಲಾಖೆ, ಸರಕಾರ ಬದ್ಧವಾಗಿದೆ. ಯಾವುದೇ ಆತಂಕ ಬೇಡ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next