Advertisement

ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರದ ಕಾಳಜಿ: ಸಚಿವ ಡಾ.ಕೆ.ಸುಧಾಕರ್‌

07:39 PM Feb 15, 2022 | Team Udayavani |

ಬೆಂಗಳೂರು: ಕ್ಯಾನ್ಸರ್‌ ಗೊಳಗಾದ ಮಕ್ಕಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಅಗ್ಯತವಿರುವ ಹಿನ್ನೆಲೆಯಲ್ಲಿ ಬಡ ಕುಟುಂಬಗಳಲ್ಲಿ ಕ್ಯಾನ್ಸರ್‌ಗೊಳಗಾದ ಮಕ್ಕಳಿಗಾಗಿ ಬೋನ್‌ ಮ್ಯಾರೋ ಟ್ರಾನ್ಸ್ ಪ್ಲಾಂಟ್‌ನ್ನು ಉಚಿತವಾಗಿ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್‌ ದಿನ ಅಂಗವಾಗಿ ದಾನಿ ರಾಜಶೇಖರ್‌ ಅವರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿಕೊಡುತ್ತಿರುವ ಮೆಡಿಕಲ್‌ ಐಸಿಯುಗೆ ಭೂಮಿ ಪೂಜೆ ಹಾಗೂ ಆಸ್ಪತ್ರೆಯಲ್ಲಿ ಬೋನ್‌ ಮ್ಯಾರೋ ಟ್ರಾನ್ಸ್ ಪ್ಲಾಂಟ್‌ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡದ ಅವರು, ಮಕ್ಕಳು ಸದಾ ಆರೋಗ್ಯದಿಂದ ಇರಬೇಕು. ಕ್ಯಾನ್ಸರ್‌ ತುತ್ತಾದ ಮಕ್ಕಳಿಗೆ ಸರ್ಕಾರ ಅತ್ಯುತ್ತಮ ಚಿಕಿತ್ಸೆ ನೀಡಲಿದೆ. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸರ್ಕಾರ ರಾಜ್ಯವನ್ನು ಆರೋಗ್ಯ ಕರ್ನಾಟಕವಾಗಿ ಮಾಡಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಬೋನ್‌ ಮ್ಯಾರೋ ಟ್ರಾನ್ಸ್‌ ಪ್ಲಾಂಟ್‌ ಚಿಕಿತ್ಸೆ ಬಡವರ ಕೈಗೆಟುಕದ ಚಿಕಿತ್ಸೆಯಾಗಿದೆ. ಇದರಿಂದ ಅನೇಕ ಜೀವಗಳು ಅರಳು ಮೊದಲೇ ನಶಿಸಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಚಿಕಿತ್ಸೆಯನ್ನು ಉಚಿತವಾಗಿ ಸಿಗುವಂತೆ ಮಾಡಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಕಿದ್ವಾಯಿ ಸಂಸ್ಥೆಗೆ ಕ್ಯಾನ್ಸರ್‌ ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಂಸ್ಥೆಯ ಮೇಲೆ ಒತ್ತಡ ಹೆಚ್ಚಾಗಿದೆ. ಇದರ ಒತ್ತಡ ಕಡಿಮೆ ಮಾಡಲು ಸರ್ಕಾರ ಕಿದ್ವಾಯಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಈಗಾಗಲೇ ತುಮಕೂರು, ಕಲಬುರಗಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕಿದ್ವಾಯಿ ಸಂಸ್ಥೆಯ ಪ್ರಾದೇಶಿಕ ಕೇಂದ್ರಗಳಿವೆ. ಈ ವರ್ಷ ಬೆಳಗಾವಿಯಲ್ಲೂ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next