Advertisement

ಚುನಾವಣೆ ಬಳಿಕ ಸರ್ಕಾರ ಪತನ

02:35 AM Apr 12, 2019 | Team Udayavani |

ದಾವಣಗೆರೆ: ಲೋಕಸಭಾ ಚುನಾವಣೆ ನಂತರ ಮೈತ್ರಿ ಸರ್ಕಾರ ಪತನವಾಗಲಿದೆ. ಜೆಡಿಎಸ್‌ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ, ಬೀಳಗಿ ಶಾಸಕ ಮುರುಗೇಶ್‌ ನಿರಾಣಿ ಬಾಂಬ್‌ ಸಿಡಿಸಿದ್ದಾರೆ.

Advertisement

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 28 ಲೋಕ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ 22 ಸ್ಥಾನ ಗೆಲ್ಲುವುದು ಖಚಿತ. ಮೇ 23ರಂದು ಫಲಿತಾಂಶ ಹೊರಬಿದ್ದ 24
ಗಂಟೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ರಚನೆಗೆ ಅನ್ಯ ಪಕ್ಷದ ಶಾಸಕರನ್ನು ಸೆಳೆಯಲು ಆಪರೇಷನ್‌ ಕಮಲ ಮಾಡುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್‌ನ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಿ. ಚುನಾವಣಾ ಫಲಿತಾಂಶದನಂತರ ಮೈತ್ರಿ ಸರ್ಕಾರ ಪತನ ಆಗಲಿದೆ ಎಂದು ಹೇಳಿದರು .

Advertisement

Udayavani is now on Telegram. Click here to join our channel and stay updated with the latest news.

Next