Advertisement

ಸರಕಾರಿ ವೈದ್ಯರು ಖಾಸಗಿ ಸೇವೆ ಮಾಡಿದರೆ ವಜಾ: ಶ್ರೀರಾಮುಲು

09:42 AM Sep 11, 2019 | Sriram |

ಬೆಂಗಳೂರು: ಸರಕಾರಿ ವೈದ್ಯರು ಖಾಸಗಿ ನರ್ಸಿಂಗ್‌ ಹೋಂ ಮತ್ತು ಕ್ಲಿನಿಕ್‌ಗಳಲ್ಲಿ ಸೇವೆ ಮಾಡಿದರೆ ಅವರನ್ನು ವಜಾಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ನಾನು ಬಡವರ ಪರ ವಾಗಿರುವವನು. ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್‌ ನಡೆಸುವುದರಿಂದ ಬಡ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್‌ ತೆರೆಯುವುದು ಮತ್ತು ಖಾಸಗಿ ನರ್ಸಿಂಗ್‌ ಹೋಂಗಳಲ್ಲಿ ಸೇವೆ ಸಲ್ಲಿಸಿದರೆ ವಜಾಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಆರೋಗ್ಯ ಕೇಂದ್ರಗಳಲ್ಲಿ ವಾಸ್ತವ್ಯ
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಸೂಕ್ತ ಮೂಲ ಸೌಕರ್ಯ ಇದೆಯೇ ಇಲ್ಲವೇ ಎನ್ನುವುದನ್ನು ಪರಿಶೀಲಿಸಲು ಪ್ರಾಥ ಮಿಕ ಆರೋಗ್ಯ ಕೇಂದ್ರ ಗಳಲ್ಲಿಯೇ ವಾಸ್ತವ್ಯ ಹೂಡಲು ತೀರ್ಮಾನಿಸಿದ್ದೇನೆ. ಕೆಲವು ಆಸ್ಪತ್ರೆಗಳನ್ನು ಪಟ್ಟಿ ಮಾಡಲಾಗಿದ್ದು, ಅಲ್ಲಿನ ಸ್ಥಿತಿಗತಿ, ಸಿಬಂದಿ ಕೊರತೆ, ರೋಗಿಗಳ ಸಮಸ್ಯೆ ಗಳನ್ನು ಆಲಿಸುತ್ತೇನೆ. ಶಾಸಕರೂ ಜತೆ ಸೇರುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿ ಕ್ರಿಯಿಸಿದ ಅವರು, ಸರಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆಯಿಲ್ಲ. ನೆರೆ ಸಂತ್ರಸ್ತರಿಗೆ ಸರಕಾರ ಸೂಕ್ತ ಪರಿಹಾರ ನೀಡುತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಆ ಮನುಷ್ಯ ಅಧಿಕಾರ ಕಳೆದುಕೊಂಡು ಹಪಾ ಹಪಿಯಿಂದ ಆ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅವರಿಗೆ ಸಹಿಸ ಲಾಗುತ್ತಿಲ್ಲ ಹೀಗಾಗಿ ಆರೋಪ ಮಾಡುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಎರಡು ಬಾರಿ ಮುಖ್ಯ ಮಂತ್ರಿ ಯಾದರೂ ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲಿಲ್ಲ. ಅವರ ಹೇಳಿಕೆಗಳಿಗೆ ಸಿಡಿದೆದ್ದು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ ಅವರು ಹತಾಶರಾಗಿದ್ದಾರೆ ಎಂದು ತಿರುಗೇಟು ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next