Advertisement

ಸರ್ಕಾರ, ಕಸಾಪಗೆ ತುರ್ತು ನೋಟಿಸ್‌

06:11 AM Mar 14, 2019 | |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಅಧಿಕಾರವಧಿಯನ್ನು ಮೂರು ವರ್ಷದಿಂದ 5 ವರ್ಷಗಳಿಗೆ ವಿಸ್ತರಿಸಿ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಅಂಗೀಕರಿಸಿರುವ ನಿರ್ಣಯ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರ, ಸಹಕಾರ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ಗೆ ತುರ್ತು ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷ ಕೊ.ವೆಂ. ರಾಮಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿಯು ನ್ಯಾ. ಆಲೋಕ್‌ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮನು ಬಳಿಗಾರ್‌, ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ, ಪರಿಷತ್‌ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಮಾ.25ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು “ವಾದ ಮಂಡಿಸಿ “2018ರ ಮಾ.15ರಂದು ಉಡುಪಿ ಜಿಲ್ಲೆಯ ಕೋಟಾದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್‌ನ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಅಧಿಕಾರವಧಿಯನ್ನು ಮೂರು ವರ್ಷದಿಂದ 5 ವರ್ಷಕ್ಕೆ ವಿಸ್ತರಿಸಿ ನಿರ್ಣಯ ಅಂಗೀಕರಿಸಲಾಗಿದೆ. ಅಲ್ಲದೇ ಈ ನಿರ್ಣಯ ಪೂರ್ವಾನ್ವಯವಾಗುವಂತೆ ತೀರ್ಮಾನಿಸಲಾಗಿದೆ. ಈ ಮಧ್ಯೆ ಪೂರ್ವಾನ್ವಯ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಇಲಾಖೆ ನಿಬಂಧಕರು ಹೇಳಿದ್ದರು. ಆದರೆ, ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಮೇಲ್ಮನವಿ ಪ್ರಾಧಿಕಾರ ಮಾನ್ಯ ಮಾಡಿದೆ. 2016ರ ಮಾ.3ರಕ್ಕೆ ಅಸ್ತಿತ್ವಕ್ಕೆ ಬಂದಿರುವ ಹಾಲಿ ಕಾರ್ಯರ್ಯಕಾರಿ ಸಮಿತಿಯ ಅವಧಿ ಇದೇ ಮಾ.3ಕ್ಕೆ ಕೊನೆಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next