Advertisement

ಜಿಲ್ಲೆಯಲ್ಲಿ ಗಣಿ ಮಾಫಿಯಾ ತಡೆಗೆ ಸರ್ಕಾರ ವಿಫ‌ಲ

07:09 PM Feb 25, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ದೊಡ್ಡ ಮಾಫಿಯಾ ಆಗಿದ್ದು ತಡೆಗಟ್ಟಲು ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌, ಗಣಿ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೇಶವರೆಡ್ಡಿ ಆರೋಪಿಸಿದರು.

Advertisement

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲೇ ಭೀಕರ ದುರಂತ ಸಂಭವಿಸಿದೆ. ಜಿಲ್ಲಾಡಳಿತ ಮತ್ತು ಪೊಲೀಸ್‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಯಿಕೊಡೆಗಳಂತೆ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಗಣಿಗಾರಿಕೆ ಹಬ್ಬುತ್ತಿದೆ. ವ್ಯಾಪಕವಾಗಿ ಪರವಾನಿಗೆ ನೀಡಿದ್ದಾರೆ. ಪರವಾನಿಗೆ ಪಡೆದ ಕ್ವಾರಿಯ ಮಾಲೀಕರು ಮುಂಜಾಗ್ರತೆ ಕೈಗೊಳ್ಳದ್ದರಿಂದ 6 ಜನ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಅದಕ್ಕೆ ಸರ್ಕಾರ-ಜಿಲ್ಲಾಡಳಿತ-ಗಣಿ ಹಾಗೂ ಪೊಲೀಸ್‌ ಇಲಾಖೆಯೇ ನೇರ ಹೊಣೆ ಎಂದು ದೂರಿದರು.

ಕುಟುಂಬ ಸದಸ್ಯರಿಗೆ ಪರಹಾರ ನೀಡಿ: ಜಿಲ್ಲೆಯಲ್ಲಿ ನಡೆದಿರುವ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ದುರಂತದಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್‌. ಎಂ.ಮುನಿಯಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್‌. ರಮೇಶ್‌, ಲಾಯರ್‌ ನಾರಾಯಾಣಸ್ವಾಮಿ, ಅಡ್ಡಗಲ್‌ ಶ್ರೀಧರ್‌, ನಗರಸಭಾ ಸದಸ್ಯ ಕಣಿತಹಳ್ಳಿ ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸೂರಿ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮುದ್ದಸೀರ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next