Advertisement

ಸರಕಾರದ ಯೋಜನೆ ಜನರಿಗೆ ತಿಳಿಸುವಲ್ಲಿ ವಿಫ‌ಲ:ಸಿಎಂ ಅಸಮಾಧಾನ 

10:58 AM Oct 18, 2017 | Team Udayavani |

ಬೆಂಗಳೂರು: ರಾಜ್ಯ ಸರಕಾರ ನಾಲ್ಕು ವರ್ಷಗಳಲ್ಲಿ ಜಾರಿಗೊಳಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಜನರಿಗೆ ಸರಿಯಾಗಿ ತಿಳಿಸಿಕೊಡುವಲ್ಲಿ ಹಲವು ಸಚಿವರು ಹಾಗೂ ಅಧಿಕಾರಿಗಳು ವಿಫ‌ಲರಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

Advertisement

“ಸಮರ್ಥ ಆಡಳಿತಕ್ಕೆ ಮಾಧ್ಯಮಗಳ ಜತೆ ಜನರೆಡೆಗೆ’ ಕುರಿತ ಕಾರ್ಯಾ ಗಾರ ಉದ್ಘಾಟಿಸಿ ಅವರು ಮಾತನಾಡಿ, ಇನ್ನಾದರೂ ಸಚಿವರು, ಅಧಿಕಾರಿಗಳು ಜನರಿಗೆ ಸೂಕ್ತ ಮಾಹಿತಿ ತಲುಪಿಸಿದರೆ ಯೋಜನೆಗಳ ಲಾಭವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ  ಸಿಎಂ ಹಿಂಬಾಲಕರ ಸಂಖ್ಯೆ ಹೆಚ್ಚಳ: ರಾಜ್ಯ ಸರಕಾರದ ಯೋಜನೆ, ನಿರ್ಧಾರಗಳ ಬಗ್ಗೆ ಜನತೆಗೆ ನಿರಂತರ ಮಾಹಿತಿ ನೀಡಲು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲ ತಾಣವನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುತ್ತಿದ್ದು, ಹಿಂಬಾಲಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಂವಾದದಲ್ಲಿ ಈ ಕುರಿತು ಮುಖ್ಯಮಂತ್ರಿ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದ ನಟರಾಜ್‌ ಪ್ರಾತ್ಯಕ್ಷಿಕೆ ನೀಡಿ ಈ ವಿಷಯ ತಿಳಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next