Advertisement

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

04:01 AM Sep 22, 2024 | Esha Prasanna |

ಶಿವಮೊಗ್ಗ/ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹಿಂದೂಗಳು ನೆಮ್ಮದಿಯಾಗಿ ಗಣೇಶೋತ್ಸವ ಆಚರಿಸುವಂತೆಯೂ ಇಲ್ಲ ಎಂದು ಬಿಜೆಪಿ ನಾಯಕರು ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗೆಲ್ಲ ಹಿಂದೂಗಳ ಮೇಲೆ ದಬ್ಬಾಳಿಕೆ ಹೆಚ್ಚುತ್ತದೆ. ಬಹುಸಂಖ್ಯಾಕರ ಹಬ್ಬ ಹರಿದಿನಗಳನ್ನೂ ನೆಮ್ಮದಿಯಾಗಿ ಆಚರಿಸುವಂತಿಲ್ಲ ಎಂದರು. ಗಣೇಶೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಾಟ, ಪೆಟ್ರೋಲ್‌ ಬಾಂಬ್‌ ಎಸೆಯಲಾಗುತ್ತಿದೆ. ದೇಶದ್ರೋಹಿ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಬಹುಸಂಖ್ಯಾಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗು ವಂತಹ ಕೃತ್ಯಗಳು ನಡೆಯುತ್ತಲೇ ಇವೆ. ನಾಗಮಂಗಲದಲ್ಲಿ ಮತೀಯ ಶಕ್ತಿಗಳು ದಾಂಧಲೆ ಎಬ್ಬಿಸಿವೆ. ಹಬ್ಬದ ಸಂಭ್ರಮದಲ್ಲಿದ್ದ ಊರಿನಲ್ಲಿ ದ್ವೇಷ ಕಾರಲಾಗಿದೆ. ದಾವಣಗೆರೆಯಲ್ಲಿಯೂ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಲಾಗಿದೆ. ಸರಕಾರದ ಮೃದು ಧೋರಣೆಯೇ ಈ ಎಲ್ಲ ಘಟನೆಗಳಿಗೆ ಕಾರಣ. ಇದರಿಂದಾಗಿಯೇ ಪ್ಯಾಲೇಸ್ತೀನ್‌, ಪಾಕಿಸ್ಥಾನದ ಧ್ವಜ ಹಾರಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ತುಮಕೂರು ವಿ.ವಿ. ಸುತ್ತೋಲೆ ಹಿಂಪಡೆಯಲಿ
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಅಲ್ಲಿನ ಪೊಲೀಸರು ವಿದ್ಯಾರ್ಥಿಗಳನ್ನು ಗಣಪತಿ ವಿಸರ್ಜನೆಗೆ ಕಳುಹಿಸಬೇಡಿ ಎಂದು ಪತ್ರ ಬರೆಯುತ್ತಾರೆ. ಈ ರೀತಿಯ ನಡವಳಿಕೆ ಹಿಂದೆ ಯಾವ ಸರಕಾರದ ಅವಧಿಯಲ್ಲಿಯೂ ಆಗಿಲ್ಲ. ಹಿಂದೂಗಳಿಗೆ ಹಬ್ಬಗಳ ಆಚರಣೆಯಲ್ಲಿ ಭಾಗವಹಿಸಬಾರದು ಎಂದು ಪತ್ರ ಬರೆದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಕುಲಸಚಿವರು ಹೊರಡಿಸಿರುವ ಸುತ್ತೋಲೆ ಯನ್ನು ಹಿಂಪಡೆಯಬೇಕೆಂದು ವಿಜಯೇಂದ್ರ ಆಗ್ರಹಿಸಿದರು.

“ಗಣೇಶ ವಿಸರ್ಜನೆ ವೇಳೆ ಗಲಾಟೆ ಪ್ರಕರಣವೊಂದರಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನೊಬ್ಬನಿದ್ದಾನೆ. ಆದರೆ ವೀಕ್ಷಣೆಗೆ ಹೋದ ಆರ್‌. ಅಶೋಕ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೇಲೂ ಪ್ರಕರಣ ದಾಖಲಿಸಿದ್ದಾರೆ. ಮಸೀದಿಯಿದೆ ಎನ್ನುವ ಕಾರಣಕ್ಕೆ ಮೆರವಣಿಗೆ ಮಾಡಬಾರದು ಎನ್ನುವುದು ಸರಿಯಲ್ಲ. ನಾವು ಪೂಜೆ ಮಾಡುವ ಸಂದರ್ಭದಲ್ಲಿ ಅವರ ನಮಾಜ್‌ ನಿಲ್ಲಿಸುತ್ತಾರೆಯೇ?”
– ಪ್ರಹ್ಲಾದ್‌ ಜೋಶಿ, ಕೇಂದ್ರ ಸಚಿವ’

Advertisement

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರನ್ನು ಗುಂಡಿಕ್ಕಿ ಕೊಲ್ಲಿ
ಹೊನ್ನಾಳಿ: ಹಿಂದೂ ಯುವಕರು ಗಣೇಶನ ಮೆರವಣಿಗೆ ಮಾಡಿಕೊಂಡು ಹೋಗುವಾಗ ಕಲ್ಲು ತೂರಿದ ದುಷ್ಕರ್ಮಿಗಳಿಗೆ ಗುಂಡು ಹೊಡೆಯಿರಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ವಿಧಾನ ಸೌಧದಲ್ಲೇ ಪಾಕಿಸ್ಥಾನ್‌ ಜಿಂದಾಬಾದ್‌ ಎಂದವರನ್ನು ಬಂಧಿ ಸದೆ ಗಣೇಶ ಉತ್ಸವ ಮಾಡುತ್ತಿರುವ ಹಿಂದೂ ಯುವಕರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತಿರುವವರಿಗೆ ನಾಚಿಕೆಯಾಗಬೇಕು. ತತ್‌ಕ್ಷಣ ಅಮಾಯಕ ಹಿಂದೂ ಯುವಕರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆದು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next