Advertisement

ಗೋಶಾಲೆ ಮುಚ್ಚದಂತೆ ಸರ್ಕಾರಕ್ಕೆ ತಾಕೀತು

07:04 AM Jul 03, 2019 | Team Udayavani |

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ತೆರೆಯಲಾಗಿರುವ “ಗೋಶಾಲೆಗಳು ಮತ್ತು ಜಾನುವಾರು ಶಿಬಿರ’ಗಳನ್ನು ಮುಚ್ಚದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಂಗಳವಾರ ತಾಕೀತು ಮಾಡಿದೆ.

Advertisement

ಈ ಕುರಿತಂತೆ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ. ಮಲ್ಲಿಕಾರ್ಜುನ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಎಚ್‌.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಚಿತ್ರದುರ್ಗ, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸರ್ಕಾರ ಗೋಶಾಲೆಗಳನ್ನು ಮುಚ್ಚುತ್ತಿದೆ ಎಂದು ದೂರಿದರು. ಈ ಬಗ್ಗೆ ನ್ಯಾಯಪೀಠ ಸರ್ಕಾರದ ಪರ ವಕೀಲರನ್ನು ಕೇಳಿದಾಗ, ಯಾವುದೇ ಗೋಶಾಲೆಗಳನ್ನು ಮುಚ್ಚುತ್ತಿಲ್ಲ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಗೋಶಾಲೆ ಮುಚ್ಚಲಾಗಿತ್ತು. ಆದರೆ, ಈಗ ಅದನ್ನು ಪುನ: ಆರಂಭಿಸಲಾಗಿದೆ ಎಂದು ವಕೀಲರು ತಿಳಿಸಿದರು. ಈಗಾಗಲೇ ತೆರೆಯಲಾಗಿರುವ ಯಾವುದೇ ಗೋಶಾಲೆ ಮತ್ತು ಜಾನುವಾರು ಶಿಬಿರಗಳನ್ನು ಮುಂದಿನ ವಿಚಾರಣೆವರೆಗೆ ಮುಚ್ಚದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಜು.5ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next