Advertisement
ಎನ್.ಆರ್.ಸಿ. ನೀತಿಯನ್ನು ಭಾರತ ಸರ್ಕಾರ ನಿರ್ಧಾರ ಮಾಡುತ್ತೆ. ನಾವೀಗ ಸಧ್ಯಕ್ಕೆ ರಾಜ್ಯದಲ್ಲಿ ಮಾಹಿತಿ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದೇವೆ ಬಳಿಕ ಈ ಮಾಹಿತಿಯನ್ನು ಕೇಂದ್ರದ ಗೃಹ ಸಚಿವಾಲಯಕ್ಕೆ ಕಳಿಸಲಿದ್ದೇವೆ ಅಲ್ಲಿ ಕೇಂದ್ರ ಗೃಹ ಸಚಿವರು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಸಚಿವ ಬೊಮ್ಮಾಯಿ ಅವರು ಮಾಹಿತಿ ನೀಡಿದರು.
ಈ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಆಂದ್ರ ಪ್ರದೇಶ ಹಾಗೂ ಮಹಾರಾಷ್ಟ್ರ ಪೋಲಿಸ್ ಜೊತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿಯನ್ನು ಗೃಹ ಸಚಿವರು ನೀಡಿದರು. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದೂ ಸಚಿವ ಬೊಮ್ಮಾಯಿ ಅವರು ಹೇಳಿದರು. ಆದರೆ ತನಿಖೆ ಪೂರ್ಣಗೊಳ್ಳುವವರೆಗೆ ಯಾವ ಮಾಹಿತಿಯನ್ನೂ ಬಹಿರಂಗಪಡಿಸುವುದಿಲ್ಲ ಎಂದು ಗೃಹ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.