Advertisement

ಸರ್ಕಾರಕ್ಕೆ ಸದ್ಯ ತೊಂದರೆ ಇಲ್ಲ: ಎಚ್‌.ಡಿ.ರೇವಣ್ಣ

11:41 PM Jul 12, 2019 | Lakshmi GovindaRaj |

ಮೈಸೂರು: “ದೇವರ ಆಶೀರ್ವಾದ ಇರುವವರೆಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರ್ತಾರೆ. ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದ್ದು, ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ’ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

Advertisement

ಎರಡನೇ ಆಷಾಢ ಶುಕ್ರವಾರ ನಿಮಿತ್ತ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, 20 ನಿಮಿಷಗಳ ಕಾಲ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಹೆಸರಲ್ಲಿ ಚಾಮುಂಡೇಶ್ವರಿಗೆ ಸಂಕಲ್ಪ ಮಾಡಿದ್ದೇವೆ. ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಸಚಿವ ಸಾ.ರಾ.ಮಹೇಶ್‌ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿರೋ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಜೊತೆ ಅಧಿಕಾರ ಹಂಚಿಕೊಳ್ಳುವ ಬೆಳವಣಿಗೆ ಸದ್ಯಕ್ಕಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next