Advertisement

ಸರ್ಕಾರದ್ದು ಕೀಳುಮಟ್ಟದ ರಾಜಕೀಯ: ಸಿದ್ದರಾಮಯ್ಯ

04:56 AM Jun 11, 2020 | Lakshmi GovindaRaj |

ಮೈಸೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನೀಡದಿರುವುದು ಕೀಳುಮಟ್ಟದ ರಾಜಕಾರಣ. ಇದನ್ನು ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಮಾಜಿ ಮುಖ್ಯ  ಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು.

Advertisement

ನಾನು ಯಡಿಯೂರಪ್ಪ ಅವರಿಂದ ಈ ರೀತಿಯ ಕೀಳು ಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ  ಅಮಿತ್‌ ಶಾಗೆಒಂದು ನಿಯಮ, ನಮಗೊಂದು ನಿಯಮ ಏಕೆ?. ನಾವು ಸಾಮಾಜಿಕ ಅಂತರ ಕಾ ಯ್ದುಕೊಂಡೆ ಕಾರ್ಯಕ್ರಮ ನಡೆಸುತ್ತಿದ್ದೆವು. ಈ ಬಗ್ಗೆ ಮೌಖೀಕ ವಾಗಿ ಕೇಳಿದ್ದಾಗ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಪತ್ರದ ಮೂಲಕ  ಕೇಳಿದಾಗ ನಿರಾಕರಿಸಿದೆ. ಇನ್ನೊ ಮ್ಮೆ ಪತ್ರ ಕೊಡುವುದಿಲ್ಲ. ಮನವಿಯನ್ನೂ ಮಾಡುವುದಿಲ್ಲ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕು: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ ಎನ್ನುವುದಕ್ಕೆ ನನ್ನ ವಿರೋಧ ಇದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕು. ಆದರೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಬೇಕು. ದಾಖಲಾತಿ ಶುಲ್ಕ ಕಡಿತದ ಬಗ್ಗೆ ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಬೇಕು. ಹಾಗೆಯೇ ಖಾಸಗಿ ಶಾಲೆಗಳಲ್ಲೂ ಬಡ ಮಕ್ಕಳು ಓದುತ್ತಿದ್ದಾರೆಂಬುದು  ಸರ್ಕಾರದ ಗಮನದಲ್ಲಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next