Advertisement

ಎಲ್ಲದರಲ್ಲೂ ಕಮೀಷನ್‌ ಹೊಡೆವ ಸರ್ಕಾರ

12:14 PM Mar 25, 2019 | Lakshmi GovindaRaju |

ಬೆಂಗಳೂರು: ಒಲಾ ಕ್ಯಾಬ್‌ ಸೇವೆಗೆ ಸರ್ಕಾರ ಯಾವ ಕಾರಣಕ್ಕೆ ನಿರ್ಬಂಧ ವಿಧಿಸಿ ನಂತರ ಅನುಮತಿ ನೀಡಿದೆ ಎಂಬುದು ಗೊತ್ತಿಲ್ಲ. ಎಲ್ಲದರಲ್ಲೂ ಕಮೀಷನ್‌ ಹೊಡೆಯುವ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಿಡಿ ಕಾರಿದರು.

Advertisement

ನಗರದ ಡಾಲರ್ ಕಾಲೋನಿಯಲ್ಲಿನ ಮನೆಯ ಬಳಿ ಭಾನುವಾರ ಪ್ರತಿಕ್ರಿಯಿಸಿದ ಅವರು, ಒಲಾ ಕ್ಯಾಬ್‌ ಸೇವೆಯನ್ನು ಸರ್ಕಾರ ಯಾವ ಕಾರಣಕ್ಕೆ ನಿರ್ಬಂಧಿಸಿತು ಎಂಬುದು ಗೊತ್ತಾಗಲಿಲ್ಲ. ಎರಡನೇ ದಿನ ಮತ್ತೆ ಒಲಾ ಕ್ಯಾಬ್‌ ಸೇವೆಗೆ ಅನುಮತಿ ನೀಡಲಾಗಿದೆ. ಚುನಾವಣೆ ಸಮಯದಲ್ಲಿ ಹಣ ವಸೂಲಿಗೆ ಈ ರೀತಿ ಮಾಡಿದ್ದಾರೆ ಎನ್ನುವುದು ಜನ ಸಾಮಾನ್ಯರಿಗೆ ಅರ್ಥವಾಗಲಿದೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧಿಸುವುದಾದರೆ ಅತ್ಯಂತ ಸಂತೋಷದ ವಿಚಾರ. ಅದಕ್ಕಿಂತ ದೊಡ್ಡ ಸಂತೋಷ ಬೇರೆ ಏನಿದೆ. ನಾನು ಸಹ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next