Advertisement

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

12:52 AM May 17, 2024 | Team Udayavani |

ಲಕ್ನೋ: ಬಿಜೆಪಿ ನೇತೃತ್ವದ ಎನ್‌ಡಿಎ 230 ಸೀಟುಗಳನ್ನು ಗೆಲ್ಲುವುದಿಲ್ಲ. ಜೂನ್‌ 4ರ ಬಳಿಕ ಐಎನ್‌ಡಿಐಎ ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗುರುವಾರ ಹೇಳಿದರು.

Advertisement

ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಸಿಂಗ್‌ ಯಾದವ್‌ ಜತೆಗೂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ವಿಪಕ್ಷದ ಎಲ್ಲ ನಾಯಕರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆದಿದೆ.

ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ಜೈಲಿಗೆ ಅಟ್ಟಲಿದೆ ಎಂದು ಆರೋಪಿಸಿದರು. ಅಲ್ಲದೇ ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡುವು ದಕ್ಕಾಗಿಯೇ ಬಿಜೆಪಿ 400 ಸೀಟು ಗೆಲ್ಲುವ ಬಗ್ಗೆ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಹರಿಯಾಣ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ದಿಲ್ಲಿ, ಕರ್ನಾಟಕ, ಪಶ್ಚಿಮ ಬಂಗಾಲ ಮತ್ತು ಝಾರ್ಖಂಡ್‌ನ‌ಲ್ಲಿ ಬಿಜೆಪಿಯ ಸೀಟುಗಳಲ್ಲಿ ಭಾರೀ ಇಳಿಕೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 220ರಿಂದ 230 ಸೀಟುಗಳನ್ನು ಗೆಲ್ಲಲಿದೆ. ಹಾಗಾಗಿ ಜೂ.4ರ ಬಳಿಕ ಐಎನ್‌ಡಿಐಎ ಸರಕಾರ ರಚನೆ ಮಾಡಲಿದೆ ಎಂದು ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next