Advertisement

ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ಸಹಿಸಲ್ಲ: ಶಾಸಕ

06:54 AM Jul 11, 2020 | Lakshmi GovindaRaj |

ಅರಸೀಕೆರೆ: ತಾಲೂಕಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕೆಲವು ರಾಜಕಾರಣಿಗಳಿಂದ ಕಿರುಕುಳ ಉಂಟಾಗುತ್ತಿರುವ ಕಾರಣ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದ್ದು ಇದಕ್ಕೆ ಕಾರಣಕರ್ತರು ಯಾರು  ಎಂಬುವುದನ್ನು ಅಧಿಕಾರಿಗಳೇ ಬಹಿರಂಗಪಡಿಸಬೇಕೆಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

Advertisement

ತಾಲೂಕಿನಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು ಆಡಳಿತ ನಡೆಸುತ್ತಿದ್ದಾರೆ.  ಆದರೆ ಕೆಲವು ರಾಜಕಾರಣಿಗಳು ತಮ್ಮ ಪ್ರಭಾವ ಬಳಸಿ ಪ್ರಾಮಾಣಿಕ ಅಧಿಕಾರಿಗಳ ವಿರುದಟಛಿ ಸುಳ್ಳು ಆರೋಪ ಮಾಡುತ್ತಾ ಕರ್ತವ್ಯ ನಿರ್ವಹಿಸಲು ತೊಂದರೆ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ. ಆದ್ದರಿಂದ ತಾವು  ಯಾವುದೇ ಸರ್ಕಾರಿ ಅಧಿಕಾರಿಗಳ ಪರವಾಗಿ ಅಥವಾ ವಿರುದವಾಗಿ ಉಳಿಸಿಕೊಳ್ಳಲು ಮಂತ್ರಿಗಳ ಜೊತೆಯಲ್ಲಿ ವರ್ಗಾವಣೆ ಲಾಬಿ ನಡೆಸಿಲ್ಲ.

ಆದರೆ ತಮ್ಮದೆ ಪಕ್ಷದ ಸರ್ಕಾರ ಇದೇ ಎಂದು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ  ಅಧಿಕಾರಿಗಳನ್ನು ಬೇರೆಡೆಗೆ ವರ್ಗ ಮಾಡಿಸಿ ತಮ್ಮ ಮಾತು ಕೇಳುವ ಅಧಿಕಾರಿಗಳನ್ನು ಇಲ್ಲಿಗೆ ವರ್ಗಾವಣೆ ಮಾಡಿಸಿಕೊಳ್ಳುವ ದುರುದ್ದೇಶದಿಂದ ಕೆಲವರು ಇತಂಹ ರಾಜಕಾರಣ ನಡೆಸುತ್ತಿದ್ದಾರೆ. ತಾವು ಈ ಬೆಳೆವಣಿಗೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕರು ಎಚ್ಚರಿಸಿದರು.

ಆದರೆ ಕೆಲವು ಅಧಿಕಾರಿಗಳು ಮಧ್ಯವರ್ತಿಗಳ ಮಾತಿಗೆ ಮರುಳಾಗಿ ಇಲ್ಲಿಂದ ವರ್ಗಾವಣೆ ಮಾಡಿಸಿಕೊಂಡು ಹೋಗುವುದಾದರೇ ತಮ್ಮ ಅಭ್ಯಂತರವಿಲ್ಲ.ಆದರೆ ಪ್ರಾಮಾಣಿಕ ಅಧಿಕಾರಿಗಳನ್ನು ಉಳಿಸಿಕೊಳ್ಳಲು ತಾವು ಯಾವುದೇ ಹೋರಾಟಕ್ಕೂ ಸಿದನಾಗಿದ್ದೇನೆಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next