Advertisement

ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಮರುನೇಮಕ: ಮತ್ತೆ ಮೂರು ವರ್ಷ ಮುಂದುವರಿಕೆ

09:24 AM Oct 29, 2021 | Team Udayavani |

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರ ಅವಧಿಯನ್ನು ಸರ್ಕಾರ ಶುಕ್ರವಾರ ಮತ್ತೆ ಮೂರು ವರ್ಷಗಳವರೆಗೆ ವಿಸ್ತರಿಸಿದೆ.

Advertisement

“ಕ್ಯಾಬಿನೆಟ್ ನೇಮಕಾತಿ ಸಮಿತಿಯು ಡಿಸೆಂಬರ್ 10, 2021 ರ ನಂತರ ಮೂರು ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ಮರುನೇಮಕ ಮಾಡಲು ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅದನ್ನು ಅನುಮೋದಿಸಿದೆ” ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಶಕ್ತಿಕಾಂತ್ ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಡಿಸೆಂಬರ್ 11, 2018 ರಂದು ಮೂರು ವರ್ಷಗಳ ಕಾಲ ರಿಸರ್ವ್ ಬ್ಯಾಂಕ್ ಮುಖ್ಯಸ್ಥರಾಗಿ ನೇಮಕಗೊಂಡರು.

ಇದನ್ನೂ ಓದಿ:‘ಫೇಸ್ ಬುಕ್’ ಹೆಸರು ಬದಲಾಯಿಸಿದ ಮಾರ್ಕ್ ಜುಕರ್ ಬರ್ಗ್: ಏನಿದು ಹೊಸ ಹೆಸರು?

ಶಕ್ತಿಕಾಂತ್ ದಾಸ್ ಅವರು ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲ ಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ.

Advertisement

ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಅವರ ಸುದೀರ್ಘ ಅಧಿಕಾರಾವಧಿಯಲ್ಲಿ, ಅವರು 8 ಕೇಂದ್ರ ಬಜೆಟ್‌ಗಳ ತಯಾರಿಕೆಯಲ್ಲಿ ನೇರವಾಗಿ ಸಂಬಂಧ ಹೊಂದಿದ್ದರು. ಶಕ್ತಿಕಾಂತ್ ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ), ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್(ಎನ್‌ಡಿಬಿ) ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next