Advertisement

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಅಗತ್ಯ: ಶಂಕರನಾರಾಯಣ ಭಟ್‌

10:09 PM Jun 03, 2019 | Team Udayavani |

ಸಿದ್ದಾಪುರ: ಪ್ರತಿ ವರ್ಷದಂತೆ ಈ ವರ್ಷವು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳವಾಗಿರುವುದು ಸಂತಸ ವಿಷಯ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆತು, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಾಗ ಬೇಕು ಎಂದು ಕೊಂಡಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಂಕರನಾರಾಯಣ ಭಟ್‌ ಕೊಂಡಳ್ಳಿ ಹೇಳಿದರು.

Advertisement

ಅವರು ಶಂಕರನಾರಾಯಣ ಗ್ರಾಮದ ಕೊಂಡಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಾವು ಕೊಡಮಾಡಿದ 20 ಸಾವಿರ ರೂ. ಮೌಲ್ಯದ ನೋಟ್‌ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಬೇಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಂಕರನಾರಾಯಣ ಗ್ರಾ. ಪಂ. ಅಧ್ಯಕ್ಷ ರವಿ ಕುಲಾಲ್‌, ಸದಸ್ಯರಾದ ವಸಂತಿ ಶೆಟ್ಟಿ, ಸಂಜೀವ ಕುಲಾಲ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಗೋವಿಂದ ಎಸ್‌ ಸ್ವಾಗತಿಸಿದರು. ಹಿರಿಯ ಸಹಶಿಕ್ಷಕಿ ಅನ್ನಪೂರ್ಣೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮ ಮೊಗವೀರ ನಿರೂಪಿಸಿದರು. ಗೌರವ ಶಿಕ್ಷಕಿ ಪ್ರಮೀಳಾ ಸಹಕರಿಸಿದರು. ಶೈಲಜ ಶೆಟ್ಟಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next