Advertisement

ಸತ್ತ ಉಗ್ರರು ಎಷ್ಟೆಂದು ಸರ್ಕಾರ ತಿಳಿಸಲಿ:ಪ್ರಕಾಶ್‌ ಅಂಬೇಡ್ಕರ್‌

11:45 AM Mar 09, 2019 | |

ಬೆಳಗಾವಿ : ವಾಯುದಾಳಿಯಲ್ಲಿ ಎಷ್ಟು ಉಗ್ರರು ಸತ್ತಿದ್ದಾರೆಂದು ಕೇಂದ್ರ ಸರ್ಕಾರ ತಿಳಿಸಬೇಕು. ಸರ್ಕಾರ ಜನರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗ ಡಾ. ಪ್ರಕಾಶ್‌ ಅಂಬೇಡ್ಕರ್‌ ಆಗ್ರಹಿಸಿದ್ದಾರೆ. 

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್‌ ಮತ್ತು ಬಿಜೆಪಿಯನ್ನು ವಿರೋಧಿಸಿ ಆರ್‌ಪಿಐ ಮತ್ತು ಎಂಐಎಂ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಗೋವಾದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದರು. 

ವಿರೋಧ ಪಕ್ಷಗಳ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. 

ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದ್ದು, ಬಿಜೆಪಿ ಕೆಳವರ್ಗದ ಜನರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next