Advertisement

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

10:29 PM Jul 02, 2024 | Team Udayavani |

ನವದೆಹಲಿ: ಗರ್ಭಕೋಶ ಕ್ಯಾನ್ಸರ್‌ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮ ಮಾಡಬೇಕೆಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿಯವರು ಒತ್ತಾಯಿಸಿದರು.

Advertisement

ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಮಾತನಾಡಿದ ಅವರು, ದೇಶೀಯ ಪ್ರವಾಸವನ್ನು ಉತ್ತೇಜಿಸುವ ಬಗ್ಗೆಯೂ ಧ್ವನಿಯೆತ್ತಿದರು. ಅಂತಾರಾಷ್ಟ್ರೀಯ ಮಹಿಳಾ ದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೇಖಕಿ ಸುಧಾಮೂರ್ತಿಯವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿದ್ದರು.

9 ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಗರ್ಭಕೋಶ ಲಸಿಕೆ ಇದ್ದು, ಇದನ್ನು ಪಡೆದುಕೊಂಡರೆ ಕ್ಯಾನ್ಸರ್‌ ಅನ್ನು ತಡೆಗಟ್ಟಬಹುದು. ನಮ್ಮ ಹೆಣ್ಣುಮಕ್ಕಳ ಒಳಿತಿಗಾಗಿ ಈ ಲಸಿಕೆ ನೀಡಲು ನಾವು ಉತ್ತೇಜನ ನೀಡಬೇಕು ಎಂದು ಸುಧಾಮೂರ್ತಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next