Advertisement
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಾಹನ ಸಂಚಾರ ನಿಷೇಧ ತೆರವು ಸಂಬಂಧ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಮ್ಮ ಒಪ್ಪಿಗೆಯೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
Related Articles
Advertisement
ಉಳಿದ ನೆಲಮಟ್ಟ ಭಾಗದ ರಸ್ತೆಯ ಎರಡು ಬದಿಗಳಲ್ಲಿ 8 ಅಡಿ ಎತ್ತರದ ಕಬ್ಬಿಣದ ತಂತಿಯ ಬೇಲಿಯನ್ನು ನಿರ್ಮಿಸಿ ವನ್ಯ ಜೀವಿಗಳು ರಸ್ತೆ ದಾಟದಂತೆ ಹಾಗೂ ಜನರು ಸಹ ವನ್ಯ ಜೀವಿಗಳ ಸಂಪರ್ಕಕ್ಕೆ ಬಾರದಂತೆ ತಡೆಯಲು ಕ್ರಮ ವಹಿಸುವುದು ಅದರಲ್ಲಿ ಸೇರಿದೆ.
ಸದರಿ ಪ್ರಸ್ತಾವನೆಗೆ ರಾಜ್ಯ ಸರ್ಕಾರದ ಒಪ್ಪಿಗೆ ನೀಡಲು ಕೇಂದ್ರ ಭೂ ಸಾರಿಗೆ ಮಂತ್ರಾಲಯ ಕೋರಿದೆ. ಆದರೆ, ನಾವು ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ರಾಜ್ಯದ ಸಚಿವರಾಗಿ ಅರಣ್ಯ ಪ್ರದೇಶದಲ್ಲಿ ಸಂಚಾರಕ್ಕೆ ಅವಕಾಶ ಕೊಡುವ ಬಗ್ಗೆ ನಿಮ್ಮ ನಿಲುವು ಏನು ಎಂಬ ಪ್ರಶ್ನೆಗೆ, ಇದರಲ್ಲಿ ನನ್ನ ನಿಲುವು ಪ್ರಶ್ನೆ ಬರುವುದಿಲ್ಲ. ಮುಖ್ಯ ಕಾರ್ಯದರ್ಶಿಗಳ ಸಮಿತಿ ಹಾಗೂ ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ನೀವು ಹಾಗೂ ಮುಖ್ಯಮಂತ್ರಿಯವರು ಕೇಂದ್ರ ಸಚಿವರ ಬಳಿ ಹೋದಾಗ ಭೂ ಸಾರಿಗೆ ಇಲಾಖೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದೀರಂತೆ ಎಂದಾಗ, ಗರಂ ಆದ ಅವರು ಆ ರೀತಿ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ನಾವು ಯಾವುದಕ್ಕೂ ಒಪ್ಪಿಗೆ ನೀಡಿಲ್ಲ. ರಾಜ್ಯಕ್ಕೆ ಮಾರಕವಾಗುವ ಯಾವುದೇ ಕೆಲಸಕ್ಕೂ ನಮ್ಮ ಒಪ್ಪಿಗೆ ಇಲ್ಲ ಎಂದು ತಿಳಿಸಿದರು.