Advertisement

ಜಮ್ಮು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಸಾಧ್ಯತೆ: ಎಚ್ಚರಿಕೆ ನೀಡಿದ ಕೇಂದ್ರ

10:00 AM Jan 12, 2020 | keerthan |

ಶ್ರೀನಗರ: ವಿಶೇಷ ಸ್ಥಾನಮಾನ ರದ್ದತಿಯ ನಂತರ ಬಹುತೇಕ ಶಾಂತವಾಗಿರುವ ಜಮ್ಮು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಉಂಟಾಗುವ ಸಾಧ್ಯತೆಯಿದೆ ಎಂದು  ವರದಿಯಾಗಿದೆ. ಈ ಬಗ್ಗೆ ಗುಪ್ತಚರ ಮಾಹಿತಿಯನ್ನು ಕೇಂದ್ರ ಸರಕಾರ ರಕ್ಷಣಾ ಪಡೆಗಳಿಗೆ ನೀಡಿದ್ದು, ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

Advertisement

ಅಫ್ಘಾನಿಸ್ಥಾನ ಮೂಲದ ಶಸ್ತ್ರ ಸಜ್ಜಿತ, ಯುದ್ದ ನಿಪುಣ ಉಗ್ರರು ಭಾರತದ ಗಡಿಯೊಳಗೆ ನುಗ್ಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರ ಮಾತ್ರವಲ್ಲದೆ ಪಂಜಾಬ್ ಮತ್ತು ರಾಜಸ್ಥಾನದಲ್ಲಿಯೂ ಇಂತಹ ಸಾಧ್ಯತೆಗಳಿದ್ದು, ಅಲ್ಲೂ ಕಟ್ಟೆಚ್ಚರ ವಹಿಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ ಸುಮಾರು 350ರಿಂದ 400 ಉಗ್ರರು ಈಗಾಗಲೇ ಕಾಶ್ಮೀರ ಕಣಿವೆಗೆ ನುಸುಳಿದೆ. ಈ ಮಾರ್ಚ್ ತಿಂಗಳ ನಂತರ ಬೇಸಿಗೆ ಕಾಲದಲ್ಲಿ ಉಗ್ರರ ಒಳ ನುಸುಳುವಿಕೆ ಜಾಸ್ತಿಯಾಗಬಹುದು ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next