Advertisement

ಸರಕಾರಿ ಮಹಿಳಾ ಕಾಲೇಜು: ಮತ ಯಂತ್ರ ಪ್ರಾತ್ಯಕ್ಷಿಕೆ

08:17 PM Mar 26, 2019 | Team Udayavani |

ಉಡುಪಿ: ಮತದಾನ ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯವೂ ಹೌದು. ನಮ್ಮ ಹಕ್ಕನ್ನು ಚಲಾಯಿಸದಿದ್ದರೆ ಪ್ರಶ್ನಿಸುವ ಹಕ್ಕನ್ನು ಕಳೆದುಕೊಳ್ಳುತ್ತೇವೆ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ದೃಢ ಮನಸ್ಸಿನಿಂದ ಮತ ಚಲಾಯಿಸಬೇಕು ಎಂದು ಉಡುಪಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್‌ ಹೇಳಿದರು.

Advertisement

ಉಡುಪಿ ಅಜ್ಜರಕಾಡು ಸರಕಾರಿ ಮಹಿಳಾ ಪ್ರ.ದರ್ಜೆ ಕಾಲೇಜಿನಲ್ಲಿ ಮತ‌ದಾನದ ಅರಿವು ಮತ್ತು ಮತಯಂತ್ರಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಎಸ್‌. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸ್ವೀಪ್‌ ಸಮಿತಿಯ ಸಂಚಾಲಕ ಎನ್‌. ನಿತ್ಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ವಂದಿಸಿದರು. ಐಕ್ಯುಎಸಿ ಸಂಚಾಲಕ ಸೋಜನ್‌ ಕೆ.,ಕ್ಯಾಂಪಸ್‌ ರಾಯಭಾರಿಗಳಾದ ಶಮಿನಾ ಮತ್ತು ಸ್ವಾತಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next