Advertisement

ಪತಂಜಲಿ ಸುಳ್ಳು ಜಾಹೀರಾತು ಪ್ರಕರಣ: ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆಯೇ?: ಸುಪ್ರೀಂ

11:01 PM Feb 27, 2024 | Team Udayavani |

ನವದೆಹಲಿ: ಸುಳ್ಳು ಹಾಗೂ ಹಾದಿತಪ್ಪಿಸುವ ಜಾಹೀರಾತು ಪ್ರಕಟಿಸುತ್ತಿರುವ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಈ ವಿಚಾರದಲ್ಲಿ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Advertisement

ಯೋಗಗುರು ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆ ಹಲವು ತಪ್ಪು ಮಾಹಿತಿಗಳಿಂದ ಕೂಡಿದ ಜಾಹೀರಾತುಗಳನ್ನು ನೀಡಬಾರದು ಎಂದು ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಸಂಸ್ಥೆಗೆ ಎಚ್ಚರಿಕೆ ನೀಡಲಾಗಿತ್ತು. ಇದರ ಹೊರತಾಗಿಯೂ ಕೆಲ ಕಾಯಿಲೆಗಳನ್ನು ಗುಣಪಡಿಸುವ ಬಗ್ಗೆ ಮತ್ತು ಆಲೋಪತಿ ವೈದ್ಯ ಪದ್ಧತಿಯ ಬಗ್ಗೆ ಪದೇ ಪದೆ ತಪ್ಪು ಮಾಹಿತಿಗಳಿಂದ ಕೂಡಿದ ಜಾಹೀರಾತುಗಳನ್ನು ಸಂಸ್ಥೆ ನೀಡುತ್ತಿರುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ.

“ಯೋಗವನ್ನು ಜನಪ್ರಿಯಗೊಳಿಸಿದ ಯೋಗ ಗುರು ರಾಮ್‌ದೇವ್‌ ಬಗ್ಗೆ ಗೌರವ ಇದೆ. ಹಾಗೆಂದ ಮಾತ್ರಕ್ಕೆ ಅವರು ಮತ್ತೂಂದು ವೈದ್ಯ ಪದ್ಧತಿ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ಸಹಿಸಲಾಗದು’ ಎಂದಿದೆ. ಜತೆಗೆ, ಈ ಕೂಡಲೇ ಅಂಥ ಜಾಹೀರಾತುಗಳ ಪ್ರಸಾರ ಸ್ಥಗಿತಗೊಳಿಸುವಂತೆಯೂ ಸೂಚಿಸಿದೆ.

ಇದನ್ನೂ ಓದಿ: Lok Sabha Election: ದೆಹಲಿಯ 4, ಹರ್ಯಾಣದ 1 ಕ್ಷೇತ್ರಕ್ಕೆ ಆಪ್‌ ಅಭ್ಯರ್ಥಿಗಳ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next