Advertisement

ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸರಕಾರದ ಬೇಜವಾಬ್ದಾರಿ ಕಾರಣ: ಸಿದ್ದರಾಮಯ್ಯ ಟೀಕೆ

12:46 AM Feb 27, 2022 | Team Udayavani |

ಮಂಗಳೂರು: ಉಕ್ರೇನ್‌ಮೇಲೆ ರಷ್ಯಾ ಯುದ್ಧ ಸಾರುವ ವಿಚಾರ 15 ದಿನಗಳ ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತಿಳಿದಿದ್ದರೂ ಅಲ್ಲಿರುವ ವಿದ್ಯಾರ್ಥಿಗಳನ್ನು ಕರೆತರಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇದ್ದದ್ದು ಸರಕಾರಗಳ ಬೇಜವಾಬ್ದಾರಿತನ ಎಂದು ವಿಧಾನಸಭಾ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

Advertisement

ಶನಿವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಅಲ್ಲಿದ್ದಾರೆ ಎಂಬುದು ಸರಕಾರಗಳಿಗೆ ಗೊತ್ತಿತ್ತು. ಅವರೀಗ ಉಕ್ರೇನ್‌ನ ವಿವಿ ಧೆೆಡೆ ಸಿಲುಕಿದ್ದಾರೆ. ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು ವಿದ್ಯಾರ್ಥಿಗಳಿಗೆ ತಾಯ್ನಾಡಿಗೆ ಮರಳಿ ಬರಲು ಸಮಸ್ಯೆಯಾಗಿದೆ ಎಂದರು.

ಗಲಭೆಗೆ ಈಶ್ವರಪ್ಪ ಕಾರಣ
ಶಿವಮೊಗ್ಗದಲ್ಲಿ ಹರ್ಷ ಸಾವಿನ ಬಳಿಕ ನಡೆದ ಗಲಭೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಆರೋಪಿಸಿದ ಸಿದ್ದರಾಮಯ್ಯ ಅವರು ಹರ್ಷ ಮನೆಗೆ ಕಾಂಗ್ರೆಸ್‌ ಪಕ್ಷದಿಂದ ಯಾರೂ ಹೋಗಿಲ್ಲ ಅನ್ನುವುದು ನಿಜ. ಅದು ವೈಯಕ್ತಿಕ ದ್ವೇಷದಿಂದ ನಡೆದಿರುವ ಕೊಲೆಯಾಗಿದ್ದು, ಅದಕ್ಕೆ ರಾಜಕೀಯ ಬಣ್ಣ ಕಟ್ಟಲಾಗಿದೆ. ಹರ್ಷ ಸಾವಿಗೂ ಹಿಜಾಬ್‌ಗೂ ಸಂಬಂಧವಿಲ್ಲ ಎಂದರು.

ಬೆಳ್ತಂಗಡಿಯಲ್ಲಿ ನಡೆದ ಹತ್ಯೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬಜರಂಗ ದಳದವರು ಮಾಡಿರುವ ಹತ್ಯೆ ಇದು. ಶಿವಮೊಗ್ಗ, ಬೆಳ್ತಂಗಡಿ ಎರಡೂ ಕಡೆಗೆ ಹತ್ಯೆಯನ್ನು ಖಂಡಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next