Advertisement

Governer: ಪ್ರಾಸಿಕ್ಯೂಷನ್‌ ವಿಚಾರದಲ್ಲಿ ಕಾಂಗ್ರೆಸ್‌ ಹಸಿ ಸುಳ್ಳು: ವಿಪಕ್ಷ ನಾಯಕ ಅಶೋಕ್‌

01:32 AM Sep 02, 2024 | Team Udayavani |

ಬೆಂಗಳೂರು: ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರ ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸಲು ಹೊರಟಿರುವುದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ.

Advertisement

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸರಕಾರದ ಸರಣಿ ಭ್ರಷ್ಟಾಚಾರ ಬಯಲಾದಾಗಿನಿಂದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು ಆದಿ ಯಾಗಿ ಹಲವಾರು ಕಾಂಗ್ರೆಸ್‌ ನಾಯಕರು ಸಂವಿಧಾನಿಕ ಹುದ್ದೆ ಎಂಬುದನ್ನೂ ಮರೆತು ರಾಜ್ಯಪಾಲರನ್ನ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬಾಂಗ್ಲಾದೇಶದ ರೀತಿ ದಾಳಿ ಮಾಡುವ ಬೆದರಿಕೆ ಒಡ್ಡುವುದು, ಫ್ರೆಂಡ್ಲಿ ಗವರ್ನರ್‌ ಎಂದು ನ್ಯಾಯಾಲಯದಲ್ಲಿ ಆರೋಪ ಹೊರಿಸುವುದು, ಬಿಜೆಪಿ ಏಜೆಂಟ್‌ ಎಂದು ಛೇಡಿಸುವುದು, ಹೀಗೆ ಒಂದಲ್ಲ ಒಂದು ರೀತಿಯಲ್ಲಿ ರಾಜ್ಯಪಾಲರಿಗೆ ಅಗೌರವ ತೋರುತ್ತಲೇ ಬಂದಿದೆ ಎಂದು ದೂರಿದರು.

ರಾಜಭವನದಲ್ಲಿ ಯಾವುದೇ ಪ್ರಾಸಿಕ್ಯೂಷನ್‌ ಅನುಮತಿ ಮನವಿ ಬಾಕಿ ಇಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ದು ಮುಖ್ಯಮಂತ್ರಿಗಳ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್‌ ಅನುಮತಿ ನೀಡಿ ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್‌ ಪಕ್ಷದ ಆರೋಪ ಹಸಿ ಸುಳ್ಳು ಮಾತ್ರ ಎಂದು ಸಾಬೀತಾಗಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next