Advertisement

Governors ಕೇಂದ್ರ ರಾಜ್ಯಗಳ ನಡುವೆ ಸೇತುವೆ: ಮೋದಿ

01:08 AM Aug 03, 2024 | Team Udayavani |

ಹೊಸದಿಲ್ಲಿ: ರಾಜ್ಯಪಾಲರು ಕೇಂದ್ರ ಮತ್ತು ರಾಜ್ಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ದಿಲ್ಲಿಯಲ್ಲಿ ಆರಂಭವಾದ 2 ದಿನಗಳ ರಾಜ್ಯಪಾಲರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜನರು ಮತ್ತು ಸಂಘಟನೆಗಳ ಜತೆಗೆ ಮಾತುಕತೆ ನಡೆಸಿ, ಸೌಲಭ್ಯ ವಂಚಿತರಿಗೆ ನೆರವಾಗುವ ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜನರಿಗೆ ಸೌಲಭ್ಯ ಮತ್ತು ಸೇವೆಗಳನ್ನು ತಲುಪಿಸವುದಕ್ಕಾಗಿ ಕೇಂದ್ರ-ರಾಜ್ಯಗಳ ನಡುವೆ ತಡೆ ರಹಿತ ಸಮನ್ವಯಕ್ಕಾಗಿ ಮೋದಿ ಸರಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next