Advertisement
ರಾಜ್ಯಪಾಲರಾಗಿ ನೇಮಕಗೊಂಡಿರುವವರು ಸಾರ್ವಜನಿಕ ಜೀವನದಲ್ಲಿ ಹೆಚ್ಚಿನ ಅನುಭವ ಹೊಂದಿವರೇ ಆಗಿರುತ್ತಾರೆ. ಹೀಗಾಗಿ ಅವರ ಅನುಭವ ಸಾರ್ವಜನಿಕರಿಗೆ ಸಿಗಬೇಕು. ರಾಜ್ಯಪಾಲರು ಕೇವಲ ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುವಲ್ಲಿಗೆ ಮಾತ್ರ ಸೀಮಿತವಾಗಬಾರದು. ಆಯಾ ರಾಜ್ಯಗಳಲ್ಲಿನ ಜನರ ಯೋಗಕ್ಷೇಮದತ್ತ ಗಮನ ನೀಡಬೇಕು ಎಂದರು. ದೇಶ ಸಹಕಾರ ಒಕ್ಕೂಟ ವ್ಯವಸ್ಥೆಗೆ ಆದ್ಯತೆ ನೀಡುತ್ತದೆ ಮತ್ತು ರಾಜ್ಯಗಳ ನಡುವೆ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡಬೇಕು ಎಂದರು.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ತಮ್ಮ ತಮ್ಮ ರಾಜ್ಯದ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ಇದರ ಜತೆಗೆ ಅಲ್ಪಸಂಖ್ಯಾಕರು ಮತ್ತು ಎಸ್ಸಿ/ಎಸ್ಟಿ ವರ್ಗದವರ ಹಿತಾಸಕ್ತಿ ಕಾಪಾಡುವಲ್ಲಿ ಪ್ರಧಾನ ಪಾತ್ರ ವಹಿಸಬೇಕು ಎಂದರು.