Advertisement

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚಲು ಯಾರು ಸಿಗಲ್ಲ: ಕಾರಜೋಳ ಟೀಕೆ

05:54 PM Oct 18, 2022 | Team Udayavani |

ಬೀದರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಕಾಂಗ್ರೆಸ್ ಜೋಡೋ’ ಯಾತ್ರೆ ಕೇವಲ ನಾಟಕ, ಹೊಸ ಗಿಮಿಕ್ ಅಷ್ಟೇ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

Advertisement

ಔರಾದನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಏನು ಸಾಧನೆ ಈಗ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಾಸ್ಪದ. ಜನ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಜೋಡೋ ಯಾತ್ರೆಯನ್ನು ಹರಿದು ಹಂಚಿ ಹೋಗಿರುವ ಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಲ್ಲಿ ಮಾಡಿದರೆ ಸರಿಯಾಗುತ್ತಿತ್ತು. 2024ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚಲು ಸಹ ಯಾರು ಸಿಗುವುದಿಲ್ಲ ಎಂದು ಭವಿಷ್ಯ ನುಡಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next