Advertisement

ಸಿದ್ದರಾಮಯ್ಯನವರ ಭವಿಷ್ಯ ಎಂದಿಗೂ ಸತ್ಯವಾಗುವುದಿಲ್ಲ: ಗೋವಿಂದ ಕಾರಜೋಳ

01:08 PM Aug 15, 2021 | Team Udayavani |

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಾಗಿನಿಂದ ಸಿದ್ದರಾಮಯ್ಯನವರು ಭವಿಷ್ಯ ಹೇಳಿಯೇ ಹೇಳುತ್ತಿದ್ದಾರೆ. ಆದರೆ ಅವರ ಭವಿಷ್ಯ ಯಾವತ್ತೂ ಸತ್ಯವಾಗುವುದಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದರು.

Advertisement

ರವಿವಾರ ಬೆಳಗಾವಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯರ ಭವಿಷ್ಯ ನಿಜ ಆಗುವುದಿಲ್ಲ. ಹೀಗಾಗಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂದರು.

ಅದೇ ರೀತಿ ಮುಂದೆ 2023ರ ಚುನಾವಣೆಯಲ್ಲಿಯೂ ಸ್ವಂತ ಬಲದ ಮೇಲೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಬೊಮ್ಮಾಯಿ ಸರ್ಕಾರದ ಪೂರ್ಣಾವಧಿ ಬಗ್ಗೆ ಅನುಮಾನಬೇಡ: ಎಸ್. ಟಿ.ಸೋಮಶೇಖರ್

ಸರ್ಕಾರದಲ್ಲಿ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹಸ್ತಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಯಾವುದೇ ಬೆಳವಣಿಗೆ ಇಲ್ಲ. ಬೊಮ್ಮಾಯಿ ಅವರು ಅನುಭವಿಯಾಗಿದ್ದು ಒಳ್ಳೆಯ ಆಡಳಿತ ನೀಡುತ್ತಾರೆ ಎಂದರು.

Advertisement

ಕಳೆದ ಕೆಲವು ದಿನಗಳಿಂದ ಸಿ.ಟಿ.ರವಿ ಹಾಗೂ ಪ್ರಿಯಾಂಕ ಖರ್ಗೆ ಅವರು ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ಆಗಲಿ ನಮ್ಮನ್ನು ಅಗಲಿ ಹೋಗಿರುವವರ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಆಡಬಾರದು. ಸಾರ್ವಜನಿಕ ಜೀವನದಲ್ಲಿ ಇರಬೇಕಾದರೆ ನಮ್ಮಿಂದ ಒಳ್ಳೆಯ ಕೆಲಸಗಳು ಆಗುತ್ತವೆ ಎಂದರು. ಕೆಟ್ಟ ಕೆಲಸಗಳು ಆಗಿರುತ್ತವೆ. ನಾವು ಸಂಸ್ಕೃತಿಗೆ ಧಕ್ಕೆ ಬರುವಂತಹ ಭಾಷೆಯನ್ನು ಬಳಸಬಾರದು ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next