Advertisement

ಸಚಿವ ಸ್ಥಾನಕ್ಕೆ ಎಂದೂ ಗೋಗರೆದವನಲ್ಲ, ಪಕ್ಷದ ನಿರ್ಧಾರಕ್ಕೆ ನಾನು ಬದ್ಧ : ಸಚಿವ ಕಾರಜೋಳ

06:08 PM Apr 25, 2022 | Team Udayavani |

ವಿಜಯಪುರ : ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷವನ್ನು ತಾಯಿ ಎಂದು ತಿಳಿದಿದ್ದು, ಸಂಪುಟ ವಿಸ್ತರಣೆ ವೇಳೆ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು‌.

Advertisement

ಸೋಮವಾರ ಉದ್ದೇಶಿತ ಮದಭಾವಿ ಬಳಿ ನಿರ್ಮಾಣ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ಹಿರಿಯ ಸಚಿವರನ್ನು ಕೈಬಿಡಲಿದ್ದಾರೆ ಎಂಬ ವಿಷಯ ನನಗೆ ತಿಳಿದಿಲ್ಲ. ಹೀಗಾಗಿ ಪಕ್ಷದ‌ ನಿರ್ಧಾರಕ್ಕೆ ಬದ್ಧ ಎಂದರು.

ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿ ಪರಮಾಧಿಕಾರ. ಇಷ್ಟಕ್ಕೂ ನಾನು ಸಚಿವ ಸ್ಥಾನಕ್ಕೆ ಎಂದೂ ಗೋಗರೆದವನಲ್ಲ. ಹೀಗಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದರು.

ಹೈಕಮಾಂಡ್ ಕರೆ ಬರುತ್ತಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಒಪ್ಪಿಗೆ ಪಡೆದು ಸಂಪುಟ ವಿಸ್ತರಣೆ ಮಾಡಲಿದ್ದಾರೆ . ಸಂಪುಟ ವಿಸ್ತರಣೆ ವೇಳೆ ವಿಜಯಪುರ ಜಿಲ್ಲೆಗೆ ಆದ್ಯತೆ, ಅವಕಾಶ ಸಿಗುವ ವಿಷಯ ನನಗೆ ಗೊತ್ತಿಲ್ಲ, ಮುಖ್ಯಮಂತ್ರಿ ಬೊಮ್ಮಾಯಿ ಈ ಬಗ್ಗೆ ನಿರ್ಧರಿಸಲಿದ್ದಾರೆ ಎಂದರು.

ಇದನ್ನೂ ಓದಿ : ರಾಣಾ ದಂಪತಿಗೆ ಸಂಕಷ್ಟ: ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್

Advertisement
Advertisement

Udayavani is now on Telegram. Click here to join our channel and stay updated with the latest news.

Next