Advertisement

ಗೋರಕ್ಷಕ ಕಾಯ್ದೆ: ರಾಜ್ಯ ಸರ್ಕಾರದ ಸ್ಪಷ್ಟನೆ

10:56 AM May 05, 2017 | Team Udayavani |

ಬೆಂಗಳೂರು: ಕರ್ನಾಟಕ ಗೋವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964ರ ಪರಿಚ್ಛೇಧ 15ರ ಅಡಿಯಲ್ಲಿ “ಕಾನೂನು ರೀತ್ಯಾ ರಚಿಸಲಾದ ಗುಂಪು ಅಥವಾ ಈ ಕಾನೂನಿನಡಿ ಕ್ರಮ ಕೈಗೊಳ್ಳಬಹುದಾದ ಅಧಿಕಾರವುಳ್ಳ ವ್ಯಕ್ತಿಗಳು ಉತ್ತಮ ಉದ್ದೇಶದಿಂದ ಕಾನೂನಿ ನಲ್ಲಿ ನೀಡಲಾಗಿರುವ ಅವಕಾಶದನ್ವಯ ಜರುಗಿಸಿದ ಕ್ರಮಗಳಿಗೆ ರಕ್ಷಣೆ ನೀಡುತ್ತದೆಯೇ ಹೊರತು, ಯಾವುದೇ ವ್ಯಕ್ತಿ, ಸಮೂಹಗಳು ಗೋರಕ್ಷಣೆಯ ಹೆಸರಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್‌ ಚಟುವಟಿಕೆಗಳಿಗೆ ರಕ್ಷಣೆ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Advertisement

ಕರ್ನಾಟಕ ಸರ್ಕಾರವು ಗೋರಕ್ಷಕ ರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿ ರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸ ಲಾಗಿರುವ ಕೌಂಟರ್‌ ಅಫಿಡವಿಟ್‌ನಲ್ಲಿ ಹೇಳಲಾಗಿರುವ ಅಂಶಗಳನ್ನು ಉದ್ಧರಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿ ರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದರಲ್ಲಿ ಗೋವಿನ ರಕ್ಷಣೆಯ ಹೆಸರಲ್ಲಿ ಹಿಂಸೆಯನ್ನು ಮಾಡುವ ಗುಂಪುಗಳನ್ನು ನಿಷೇಧಿಸಬೇಕು ಎಂಬುದಾಗಿ ಕೋರಲಾಗಿತ್ತು. ಇದೇ ವೇಳೆ, ಕರ್ನಾಟಕ ಗೋವಧೆ ತಡೆ ಹಾಗೂ ಜಾನುವಾರ ಸಂರಕ್ಷಣಾ ಕಾಯ್ದೆ 1964ರ ಪರಿಚ್ಛೇಧ 15 ಅಸಂವಿಧಾನಿಕ ಎಂದು ಪರಿಗಣಿಸುವಂತೆಯೂ ಕೋರಲಾಗಿತ್ತು. ಈ ಸಂಬಂಧ ಕರ್ನಾಟಕ ಸರ್ಕಾರವು ನ್ಯಾಯಾಲಯದ ನಿರ್ದೇಶನದಂತೆ ಕೌಂಟರ್‌ ಅಫ‌ಡವಿಟ್‌ ಸಲ್ಲಿಸಿದೆ. 

ಪಿಐಎಲ್‌ ವಜಾಗೆ ಮನವಿ: ಗೋ ರಕ್ಷಕ ದಳದ ಚಟುವಟಿಕೆ ವಿಚಾರವಾಗಿ ರೂಪಿಸಲಾಗಿರುವ ಕಾಯ್ದೆಯನ್ನು ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಸಮರ್ಥಿಸಿಕೊಂಡಿದೆ. ಕಾಯ್ದೆಗೆ ಸಂಬಂಧಿಸಿ ಅರ್ಜಿ ವಿಚಾರಣೆಯ ವೇಳೆ, ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವಂತಹ ಪಿಐಎಲ್‌ ವಜಾಗೊಳಿಸುವಂತೆ ಮನವಿ ಮಾಡಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next