Advertisement

ಸಿಬಿಐ ತನಿಖೆಗೆ ಕೇಂಬ್ರಿಜ್‌ ಹಗರಣ

06:00 AM Jul 27, 2018 | Team Udayavani |

ನವದೆಹಲಿ: ಕೇಂಬ್ರಿಜ್‌ ಅನಾಲಿಟಿಕಾ ಹಗರಣದ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, “ರಾಜಕೀಯ ಸಲಹಾ ಸಂಸ್ಥೆಯಾಗಿದ್ದ ಕೇಂಬ್ರಿಜ್‌ ಅನಾಲಿಟಿಕಾ, ಭಾರತದ ಫೇಸ್‌ಬುಕ್‌ ಬಳಕೆದಾರರ ಖಾತೆಯಿಂದಲೂ ಮಾಹಿತಿ ಕದ್ದಿರುವ ಶಂಕೆಯಿರುವುದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡಲಿದೆ’ ಎಂದರು.  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ವದಂತಿಗಳ ತಡೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಬಗ್ಗೆ ಈಗಾಗಲೇ ಸೂಚಿಸಲಾಗಿದೆ ಎಂದು ಪ್ರಸಾದ್‌ ರಾಜ್ಯಸಭೆಗೆ ತಿಳಿಸಿದ್ದಾರೆ. 

Advertisement

81 ಲಕ್ಷ ಕೋಟಿ ರೂ. ನಷ್ಟ: ಕೇಂಬ್ರಿಜ್‌ ಅನಾಲಿಟಿಕಾ ಹಗರಣದಿಂದಾಗಿ ಅಪಖ್ಯಾತಿ ಗೀಡಾದ ನಂತರ ಫೇಸ್‌ಬುಕ್‌ ಬಳಕೆದಾರರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಹೂಡಿಕೆಗೆ ಹಿಂದೇಟು ಹಾಕಿದ ಕಾರಣ ಫೇಸ್‌ಬುಕ್‌ ಸಂಸ್ಥೆಗೆ 81 ಲಕ್ಷ ಕೋಟಿ ರೂ. ನಷ್ಟವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next