Advertisement

Kanakapura: ಸರ್ಕಾರಿ ಬಸ್-ಕಾರಿನ ನಡುವೆ ಭೀಕರ ಅಪಘಾತ; 6 ಮಂದಿ ಸ್ಥಳದಲ್ಲೇ ಸಾವು

06:37 PM Aug 28, 2023 | Team Udayavani |

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.

Advertisement

ಅಪಘಾತದ ರಭಸಕ್ಕೆ ಕ್ವಾಲಿಸ್ ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ:Athletics Championships ಸ್ವರ್ಣ ಗೆದ್ದ ನೀರಜ್’ಗೆ ಸಿಕ್ಕ ಬಹುಮಾನದ ಹಣವೆಷ್ಟು ಗೊತ್ತಾ?

ಸಾತನೂರು ಬಳಿಯ ಕೆಮ್ಮಾಳೆ ಗೇಟ್ ಬಳಿ ಈ ಅಪಘಡ ಸಂಭವಿಸಿದ್ದು, ಕ್ವಾಲಿಸ್ ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟದಿಂದ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ.

ಮೃತ ಆರು ಮಂದಿ ಬೆಂಗಳೂರು ಮೂಲದ ನಿವಾಸಿಗಳು. ಕೆಲವರು ವಿಧಾನಸೌಧದಲ್ಲಿ ನೌಕರರಾಗಿ ಕೆಲಸ ಮಾಡುತ್ತಿರುವುದಾಗಿ ಪೊಲೀಸ್ ಮೂಲಗಳ ಮಾಹಿತಿಯನ್ನಾಧರಿಸಿ ವರದಿಯಾಗಿದೆ.

Advertisement

ನಾಗೇಶ್, ಜ್ಯೊರ್ತಿಲಿಂಗ, ಪುಟ್ಟರಾಜು, ಕುಮಾರ, ಗೋವಿಂದ ಮೃತ ವ್ಯಕ್ತಿಗಳು ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿದ್ದ 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಭೀಕರ ಅಪಘಾತದ ಪರಿಣಾಮ ಬಸ್‌ ನ ಮುಂಭಾಗಕ್ಕೆ ಕಚ್ಚಿಕೊಂಡಂತಿದ್ದ ಕ್ವಾಲಿಸ್ ಕಾರನ್ನು ಅಗ್ನಿಶಾಮಕ ಸಿಬ್ಬಂದಿಯು ಜೆಸಿಬಿ ಮತ್ತು ಕ್ರೇನ್ ಸಹಾಯದಿಂದ ಬೇರ್ಪಡಿಸಿದ್ದಾರೆ.

ಸ್ಥಳಕ್ಕೆ ಸಾತನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next