Advertisement

15 ದಿನಗಳ ನಂತ್ರ ಮುಷ್ಕರ ಕೈ ಬಿಟ್ಟ ಸಾರಿಗೆ ನೌಕರರು

05:28 PM Apr 21, 2021 | Team Udayavani |

ಬೆಂಗಳೂರು : ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಷ್ಕರವನ್ನು ಕೈಬಿಡುವುದಾಗಿ ಬುಧವಾರ(ಏ.21) ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಮತ್ತೊಂದು ವಿಚಾರ ಹೇಳಿರುವ ಕೋಡಿಹಳ್ಳಿ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ಹೈಕೋರ್ಟ್ ನ್ಯಾಯಮೂರ್ತಿಗಳು ಕೋವಿಡ್ ಕಾರಣ ಕರ್ತವ್ಯಕ್ಕೆ ಹಾಜರಾಗುವಂತೆ ಸಾರಿಗೆ ನೌಕರರಲ್ಲಿ ಕೇಳಿಕೊಂಡಿದ್ದಾರೆ. ಅವರು ಜನರಿಗೆ ತೊಂದರೆ ನೀಡಬೇಡಿ ಎಂದು ಹೇಳಿದ್ದು, ನ್ಯಾಯಾಲಯದ ಆದೇಶದಂತೆ ಮುಷ್ಕರವನ್ನು ನಿಲ್ಲಿಸುವುದಾಗಿ ತಿಳಿಸಿದ್ದಾರೆ.

ಕಳೆದ 15 ದಿನಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಕರ್ತವ್ಯಕ್ಕೆ ಹಾಜರಾಗದಂತೆ ಮುಷ್ಕರ ಹಮ್ಮಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next