Advertisement

ಮಾಣಿ: ಸರಕಾರಿ ಬಸ್‌ ಚರಂಡಿಗೆ

10:02 AM Jun 20, 2019 | keerthan |

ವಿಟ್ಲ: ಮಾಣಿ ಅಳಿರ ಸಮೀಪ ಮಂಗಳೂರಿಗೆ ತೆರಳುವ ಸರಕಾರಿ ಬಸ್‌, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಜಾರಿದ ಪರಿಣಾಮ ನಿರ್ವಾಹಕ ಗಾಯಗೊಂಡಿದ್ದಾರೆ.

Advertisement

ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಸುಬ್ರಹ್ಮಣ್ಯ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನ ಚಾಲಕ ಬ್ರೇಕ್‌ ಹಾಕಿದ ಪರಿಣಾಮ ಚರಂಡಿಗೆ ಜಾರಿದೆ. ಬಸ್ಸಿನಲ್ಲಿ 40ಕ್ಕಿಂತಲೂ ಅಧಿಕ ಮಂದಿ ಪ್ರಯಾಣಿಕರಿದ್ದರು. ಗಾಯಗೊಂಡಿರುವ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next