ಗೊರೆಬಾಳ: ಸರ್ಕಾರಿ ಬಸ್ ಗೆ ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ 9 ಗಂಟೆ ಸುಮಾರಿಗೆ ಗೋರೆಬಾಳ ಕ್ಯಾಂಪ್ ಬಳಿ ನಡೆದಿದೆ.
ಮೃತರು ಗಂಗಾವತಿ ತಾಲೂಕಿನ ಮುಷ್ಕುರ ಗ್ರಾಮದ ದುರ್ಗಪ್ಪ ಹಾಗು ವೀರೇಶ ಎಂದು ತಿಳಿದು ಬಂದಿದೆ.
ಲಿಂಗಸುಗೂರು ಕಡೆಯಿಂದ ಗಂಗಾವತಿಗೆ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ
ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ