Advertisement

Hubli; ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಸರ್ಕಾರದ ರಕ್ಷಣೆ: ಬೊಮ್ಮಾಯಿ ಆರೋಪ

02:16 PM Jan 20, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ಸರ್ಕಾರದ ರಕ್ಷಣೆಯಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಜಿಲ್ಲೆ ಹಾನಗಲ್ ನಲ್ಲಿನ ಅತ್ಯಾಚಾರ ಪ್ರಕರಣದ ನಂತರ ಈಗ ಬ್ಯಾಡಗಿಯಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ಹಲವೆಡೆ ಪ್ರಕರಣಗಳು ನಡೆದಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿವೆ ಎಂದರು.

ಇಷ್ಟೆಲ್ಲ ಪ್ರಕರಣಗಳು ಹೊರಬರುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಮಟ್ಕಾ, ಜೂಜು, ಅಕ್ರಮ ಸಾರಾಯಿ ಮಾರಾಟ ಮಾಡಲು ಅಪರಾಧಿಗಳಿಗೆ ಪೊಲೀಸರು ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರ ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ್ದರ ಫಲವಾಗಿ ಇದು ನಡೆದಿದೆ ಎಂದರು.

ಈ ಪ್ರಕರಣ ತಾರ್ಕಿಕ ಅಂತ್ಯದವರೆಗೆ ಒಯ್ಯಲು ನಿರಂತರ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next