Advertisement

ನೀರಿಲ್ಲದ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ ಡಿಎಚ್ಒ

02:57 AM May 03, 2019 | Sriram |

ಔರಾದ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗುರುವಾರ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಲು ವೈದ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Advertisement

ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಭೆ ನಡೆಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಆರ್‌. ಜಬ್ಟಾರ್‌, ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿರುವ ಜನಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಸಾರ್ವಜನಿಕ ಆಸ್ಪತ್ರೆ ಸ್ಥಾಪಿಸಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪದೇಪದೆ ಶಸ್ತ್ರಚಿಕಿತ್ಸೆ ಸ್ಥಗಿತಗೊಳ್ಳುತ್ತಿದೆ. ಇನ್ನು ಮುಂದೆ ಇಂಥ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು. ‘ನೀರಿಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯೇ ಸ್ಥಗಿತ’ ಎಂಬ ವಿಶೇಷ ವರದಿ ಗುರುವಾರ ಉದಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ವರದಿಯಿಂದ ಎಚ್ಚೆತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಆರ್‌. ಜಬ್ಟಾರ್‌ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ| ಕಲ್ಲಪ್ಪ ಮಜಿಗೆ ಆಸ್ಪತ್ರೆಗೆ ಭೇಟಿ ಸ್ಥಿತಿಗತಿ ವೀಕ್ಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next