Advertisement

ಸಾಲಗಾರರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಂತೆ ಬ್ಯಾಂಕ್ ಗಳಿಗೆ ಸೂಚನೆ

05:08 PM Jul 24, 2023 | Team Udayavani |

ಹೊಸದಿಲ್ಲಿ : ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಅಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸಣ್ಣ ಸಾಲಗಾರರು ಪಡೆದಿರುವ ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ಮಧ್ಯಪ್ರವೇಶಿಸಿದ ಸಂದರ್ಭದಲ್ಲಿ ಸೀತಾರಾಮನ್ ಈ ಹೇಳಿಕೆ ನೀಡಿದ್ದಾರೆ.

“ಕೆಲವು ಬ್ಯಾಂಕ್‌ಗಳು ನಿಷ್ಕರುಣೆಯಿಂದ ಸಾಲ ಮರುಪಾವತಿಯನ್ನು ಅನುಸರಿಸಿವೆ ಎಂಬುದರ ಕುರಿತು ನಾನು ದೂರುಗಳನ್ನು ಸ್ವೀಕರಿಸಿದ್ದೇನೆ. ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಮಾನವೀಯತೆ ಮತ್ತು ಸೂಕ್ಷ್ಮತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಷಯವನ್ನು ಸಮೀಪಿಸಬೇಕು ಎಂದು ಸರಕಾರವು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next