Advertisement

Chikkamagaluru: ವಕೀಲರು-ಪೊಲೀಸರ ವಿವಾದ; CID ತನಿಖೆಗೆ ಸರಕಾರ ಆದೇಶ

12:32 AM Dec 04, 2023 | Team Udayavani |

ಚಿಕ್ಕಮಗಳೂರು: ನಗರದ ಪೊಲೀಸರು ಮತ್ತು ವಕೀಲರ ನಡುವೆ ವಿವಾದಕ್ಕೆ ಕಾರಣವಾದ ಹಲ್ಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.

Advertisement

ಮಂಗಳೂರು ವಿಭಾಗದ ಐಜಿಪಿ ಚಂದ್ರಗುಪ್ತ ರವಿವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಬೈಕ್‌ ಓಡಿಸುವಾಗ ಹೆಲ್ಮೆಟ್‌ ಧರಿಸಿಲ್ಲ ಎಂಬ ಕಾರಣಕ್ಕೆ ವಕೀಲ ಪ್ರೀತಮ್‌ ಅವರನ್ನು ನಗರ ಪೊಲೀಸ್‌ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 6 ಪೊಲೀಸರನ್ನು ಅಮಾ ನತುಗೊಳಿಸಿದ್ದರೆ, ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೊಲೀಸರಿಂದ ಅಹೋರಾತ್ರಿ ಪ್ರತಿಭಟನೆ
ಪೊಲೀಸ್‌ ಸಿಬ್ಬಂದಿಗಳ ಅಮಾನತು ಆದೇಶ ಹಿಂಪಡೆಯಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸಿದ ವಕೀಲರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಬಂ ಧಿಸಬೇಕೆಂದು ಆಗ್ರಹಿಸಿ ಪೊಲೀಸ್‌ ಸಿಬಂದಿ ಹಾಗೂ ಅವರ ಕುಟುಂಬಸ್ಥರು ಶನಿವಾರ ರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ವಕೀಲ ಪ್ರೀತಮ್‌ ಸೇರಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next