Advertisement

ಮುಷ್ಕರ ಹಿನ್ನೆಲೆ : ಸಾರಿಗೆ ನೌಕರರ ವರ್ಗಾವಣೆಗೆ ಮುಂದಾದ ರಾಜ್ಯ ಸರ್ಕಾರ

02:12 PM Apr 10, 2021 | Team Udayavani |

ಶಿವಮೊಗ್ಗ : ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ವರ್ಗಾವಣೆಯ ಬಿಸಿ ಮುಟ್ಟಿಸಿದೆ.

Advertisement

ಮುಷ್ಕರ ಶುರುವಾಗಿ ಇಂದಿಗೆ ನಾಲ್ಕು ದಿನಗಳು ಕಳೆದಿವೆ. ಆದ್ರೂ ಸಾರಿಗೆ ನೌಕರರು ಪಟ್ಟುಬಿಡದ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು,  ಕೆಲ ಸಿಬ್ಬಂದಿಗೆ ವರ್ಗಾವಣೆಯ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಶಿವಮೊಗ್ಗ ಕೆಎಸ್ ಆರ್ಟಿಸಿ ವಿಭಾಗದ 10 ಜನ‌ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ವಿಭಾಗದಿಂದ ರಾಮನಗರ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.  ಭದ್ರಾವತಿ ಡಿಪೋದ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಕುಮಾರ್ ಹಾಗೂ ಭರಮಪ್ಪ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.

ಉಳಿದಂತೆ ಶಿವಮೊಗ್ಗದ 8 ಜನ ಚಾಲಕ ಹಾಗೂ ನಿರ್ವಾಹಕರ ವರ್ಗಾವಣೆ ಮಾಡಲಾಗಿದೆ. ಪಟ್ಟುಬಿಡದೇ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next