Advertisement

ಪ್ರತ್ಯೇಕ ರಾಜ್ಯ ಕೂಗು ಹೆಚ್ಚಾದರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ: ಈಶ್ವರ್ ಖಂಡ್ರೆ

04:36 PM Dec 23, 2021 | Team Udayavani |

ಸುವರ್ಣಸೌಧ (ಬೆಳಗಾವಿ): ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ ಸರ್ಕಾರ ಇದರ ಉದ್ದೇಶ ಮೆರತ್ತಿದೆ. ಉತ್ತರ ಕರ್ನಾಟಕದಲ್ಲಿ ಜ್ವಲಂತ ಸಮಸ್ಯೆಗಳಿದ್ದು, ಬೆಳೆ ಪರಿಹಾರ, ಪ್ರವಾಹ, ಕರೋನಾ ಸಮಸ್ಯೆಯಿದೆ. ಹಾದಿ ಬೀದಿಯಲ್ಲಿ ಜನ‌ ಸಾಯುತ್ತಿದ್ದಾರೆ. ಇದರ ಬಗ್ಗೆ ಚರ್ಚೆ ಆಗಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ. ಇದರ ವಿರುದ್ದ ಹೋರಾಟ ಮಾಡಲು ಬೀದಿಗಿಳಿಯುತ್ತೇವೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಜ್ಯಕ್ಕೆ ಕೂಗು ಹೆಚ್ಚಾಗುತ್ತದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ, ಆದರೆ ಅಂತದ್ದೇನಾದರೂ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಕಾಂಗ್ರೆಸ್ ಸೇವಾದಳ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಒಂದು ಪ್ರಶ್ನೆಗೂ ಇವರ ಬಳಿ ಉತ್ತರವಿಲ್ಲ. ಕಲ್ಯಾಣಾ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಧಾರ್ಮಿಕ ವಿಧೇಯಕ ಹಕ್ಕು ಮಂಡನೆ ಮಾಡಿ ಜನರ ಭಾವನೆಗಳನ್ನು ಕೆರಳಿಸಿದ್ದಾರೆ. ಜನರಿಗೆ ದಾರಿ ತಪ್ಪಿಸಲು ಅಪ್ರಸ್ತುತ ವಿಧೇಯಕ ಮಂಡನೆ ಮಾಡಿದ್ದಾರೆ. ಹೆದರಿಸಿ ಬೆದರಿಸಿ ಮತಾಂತರ ಮಾಡಿದರೆ ಕಾನೂನುಗಳಿವೆ. ಕಲ್ಯಾಣ ಕರ್ನಾಟಕ ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next