Advertisement

ನಕ್ಸಲ್ ವಿರುದ್ಧ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ : ಗೃಹ ಸಚಿವ ಅಮಿತ್ ಶಾ

06:19 PM Apr 05, 2021 | Team Udayavani |

ರಾಯ್‌ಪುರ: ಕೆಂಪು ಉಗ್ರರ ವಿರುದ್ಧದ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನುಡಿದಿದ್ದಾರೆ.

Advertisement

ನಕ್ಸಲರು ಹಾಗೂ ಅರೆಸೇನಾ ಪಡೆಯ ನಡುವೆ ನಡೆದಿರುವ ಗುಂಡಿನ ಕಾಳಗದಲ್ಲಿ 22 ಯೋಧರು ಹುತಾತ್ಮರಾದ ಘಟನೆ ಸಂಬಂಧ ಅಮಿತ್ ಶಾ ಇಂದು ಅಧಿಕಾರಿಗಳ ಜೊತೆ  ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತಾಡಿರುವ ಅವರು, ಕೇಂದ್ರ ಸರ್ಕಾರ ಮಾವೋವಾದಿಗಳ ವಿರುದ್ಧದ ಹೋರಾಟ ತೀವ್ರಗೊಳಿಸಿ ನಕ್ಸಲ್ ಭೀತಿಯನ್ನು ಕೊನೆಗೊಳಿಸಲು ನಿರ್ಧರಿಸಿದೆ ಎಂದು ಹೇಳಿದರು.

ಈ ಕದನದಲ್ಲಿ ಹುತಾತ್ಮರಾದ ಯೋಧರ ತ್ಯಾಗ ಹಾಗೂ ಶೌರ್ಯವನ್ನು ದೇಶವು ಎಂದಿಗೂ ಮರೆಯುವುದಿಲ್ಲ. ಹುತಾತ್ಮರಾದ ಸೈನಿಕರ ಕುಟುಂಬದ ಜೊತೆ ಇಡೀ ದೇಶ ನಿಲ್ಲಲಿದೆ. ನಕ್ಸಲರು ಸೃಷ್ಟಿಸಿದ ಈ ಅಶಾಂತಿಯ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡ ಹೋಗಲು ನಾವು ನಿರ್ಧರಿಸಿದ್ದೇವೆ ಎಂದರು.

ಮಾವೋವಾದಿಗಳ ವಿರುದ್ಧದ ಈ ಹೋರಾಟವನ್ನು ನಿಲ್ಲಿಸಲಾಗುವುದಿಲ್ಲ ಎಂದು ನಾನು ಈ ದೇಶದ ಜನತೆಗೆ ಭರವಸೆ ನೀಡುತ್ತೇನೆ. ಈ ಹೋರಾಟದಲ್ಲಿ, ನಮ್ಮ ಗೆಲುವು ನಿಶ್ಚಿತ ಎಂದು ಶಾ ನುಡಿದರು. ಜಗದಲ್‍ಪುರ್ ನಲ್ಲಿ ನಡೆದ ಸಭೆಯಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next