Advertisement

ಗೌರಿ- ಗಣೇಶ ಹಬ್ಬಕ್ಕೆ ಶುಭಕೋರಿದ ಸ್ಪೀಕರ್

01:40 PM Sep 09, 2021 | Team Udayavani |

ಶಿರಸಿ: ಗೌರಿ ಹಬ್ಬ ಹಾಗೂ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ವಿಧಾನಸಭೆಯ ಸ್ಪೀಕರ್  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

Advertisement

ನಾಳೆ ಗೌರಿ ಹಬ್ಬವಾಗಿದ್ದು, ರಾಜ್ಯದ ಮಹಿಳೆಯರಿಗೆ ಅತಿ ದೊಡ್ಡ ಹಬ್ಬವಾಗಿದೆ. ತಾಯಿ ಗೌರಿ ಎಲ್ಲರಿಗೂ ಶುಭವನ್ನು ತರಲಿ, ರಾಜ್ಯಕ್ಕೆ ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ವಿಘ್ನ ನಿವಾರಕನಾದ ಗಣೇಶ ವಿಶ್ವಕ್ಕೆ ಎದುರಾಗಿರುವ ಸಂಕಷ್ಟವನ್ನು ನಿವಾರಿಸಲಿ, ಎಲ್ಲೆಡೆ ಶಾಂತಿ, ಆರೋಗ್ಯ, ನೆಮ್ಮದಿ, ಸಮೃದ್ಧಿ ನೆಲೆಸುವಂತೆ ಮಾಡಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿ:ನಾಲ್ಕುಸಾವಿರ ಪೊಲೀಸರ ನೇಮಕಾತಿ: ಆರಗ ಜ್ಞಾನೇಂದ್ರ

ಕೋವಿಡ್ -19 ಸೋಂಕು ಇನ್ನೂ ಹೋಗಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಪ್ರತಿಯೊಬ್ಬರೂ ಜಾಗರೂಕತೆಯಿಂದ, ವ್ಯಕ್ತಿಗತ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ, ಕೋವಿಡ್ ಶಿಷ್ಟಾಚಾರ ಪಾಲನೆಯೊಂದಿಗೆ ಹಬ್ಬವನ್ನು ಆಚರಿಸುವಂತೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next