Advertisement
ಏಕೆಂದರೆ, ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಲಭ್ಯವಿರುವ 10 ಸಾವಿರ ಪದವೀಧರ ಶಿಕ್ಷಕರ ಹುದ್ದೆಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗೆ 50,633 ಅಭ್ಯರ್ಥಿಗಳು ಹಾಜರಾದರೂ ಅದರಲ್ಲಿ ನೇಮಕಾತಿಗೆ ಅರ್ಹತೆ ಪಡೆದವರು 2,264 ಮಾತ್ರ. ಇದೀಗ ನೇಮಕಾತಿಗಾಗಿ 1:2 ಅನುಪಾತದಲ್ಲಿ ಸಂದರ್ಶನಕ್ಕೆ ಕರೆದಿರುವುದರಿಂದ ಅಂತಿಮವಾಗಿ 1,332 ಅಭ್ಯರ್ಥಿಗಳು ಮಾತ್ರ ನೇಮಕಗೊಳ್ಳಲಿದ್ದಾರೆ. ಹೀಗಾಗಿ,ಶೇ.75ಕ್ಕಿಂತ ಹೆಚ್ಚು ಹುದ್ದೆ ಖಾಲಿ ಉಳಿಯಲಿದ್ದು, ಮತ್ತೂಮ್ಮೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕಿದೆ.
ಕೌನ್ಸೆಲಿಂಗ್ ನಡೆಯಲಿದೆ.
Related Articles
Advertisement
ಆದರೆ, ಶಿಕ್ಷಕರ ಹುದ್ದೆಗೆ ನಡೆದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರದಲ್ಲಿ ಬಹು ಆಯ್ಕೆಯ ಪ್ರಶ್ನೆಗಳ ಉತ್ತರವನ್ನು ಮಾತ್ರ ಪ್ರಕಟಿಸಿದ್ದು, ಥಿಯರಿ ಪ್ರಶ್ನೆಗಳ ಉತ್ತರವನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳು ಎಷ್ಟು ಅಂಕ ಪಡೆದಿದ್ದಾರೆ ಎಂಬುದನ್ನು ಬಹಿರಂಗ ಮಾಡಿಲ್ಲ. ಕಟ್ ಆಫ್ ಅಂಕದ ಬಗ್ಗೆಯೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸ್ಪಷ್ಟತೆ ಇಲ್ಲ ಎಂದು ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಇಲಾಖೆಯ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ಚರ್ಚೆ ಪದವೀಧರ ಶಿಕ್ಷಕರ ಹುದ್ದೆಗೆ ಕೌನ್ಸೆಲಿಂಗ್ಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರುವ ಸಂಖ್ಯೆಗೂ, ಖಾಲಿ ಹುದ್ದೆಗೂ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಇನ್ನೊಮ್ಮೆ ಪರೀಕ್ಷೆ ನಡೆಸಬೇಕೆ ಅಥವಾ ಈಗಾಗಲೇ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳನ್ನೇ ಎರಡನೇ ಹಂತದಲ್ಲಿ ಪರಿಗಣಿಸಬಹುದೇ ಎಂಬುದರ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಶುಕ್ರವಾರ ಸಭೆ ನಡೆಸಿದರಾದರೂ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ.
ಮೊದಲ ಹಂತದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿದ ತಕ್ಷಣವೇ ಎರಡನೇ ಹಂತದ ನೇಮಕಾತಿಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದೇವೆ. ಎರಡನೇ ಹಂತಕ್ಕೆ ಅಭ್ಯರ್ಥಿಗಳಆಯ್ಕೆಗೆ ಮಾನದಂಡ ಏನು ಎಂಬುದು ಇನ್ನೂ ತೀರ್ಮಾನವಾಗಿಲ್ಲ.
– ಶಾಲಿನಿ ರಜನೀಶ್, ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ – ರಾಜು ಖಾರ್ವಿ ಕೊಡೇರಿ